Advertisement

ಹಾಸನದಲ್ಲಿ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿತರ ಬಿರುಸಿನ ಪ್ರಚಾರ

09:43 PM Feb 25, 2023 | Team Udayavani |

ಹಾಸನ: ಹಾಸನ ವಿಧಾನಸಭಾ ಕ್ಷೇತ್ರದ ಜೆಡಿಎಸ್‌ ಅಧಿಕೃತ ಅಭ್ಯರ್ಥಿ ಸಂಬಂಧ ಬೆಂಗಳೂರಿನಲ್ಲಿ ರವಿವಾರ ನಿರ್ಣಾಯಕ ಸಭೆ ನಿಗದಿಯಾಗಿದೆ. ಇದರ ನಡುವೆಯೂ ಹಾಸನ ಕ್ಷೇತ್ರದ ಜೆಡಿಎಸ್‌ ಟಿಕೆಟ್‌ ಆಕಾಂಕ್ಷಿಗಳಾಗಿರುವ ಭವಾನಿ ರೇವಣ್ಣ ಮತ್ತು ಎಚ್‌.ಪಿ. ಸ್ವರೂಪ್‌ ಶನಿವಾರವೂ ಕ್ಷೇತ್ರದ ವಿವಿಧೆಡೆ ಬಿರುಸಿನ ಪ್ರಚಾರ ನಡೆಸಿದರು.

Advertisement

ಜೆಡಿಎಸ್‌ನಿಂದ ಸ್ಪರ್ಧೆಗಿಳಿಯಲು ಪೈಪೋಟಿಗಿಳಿದಿರುವ ಮಾಜಿ ಶಾಸಕ ದಿ| ಎಚ್‌.ಎಸ್‌. ಪ್ರಕಾಶ್‌ ಅವರ ಪುತ್ರ ಎಚ್‌.ಪಿ. ಸ್ವರೂಪ್‌ ಕ್ಷೇತ್ರದ ವಿವಿಧೆಡೆ ಎರಡು ವಾರಗಳಿಂದ ಪ್ರವಾಸ ನಡೆಸಿ ಜೆಡಿಎಸ್‌ನಿಂದ ಯಾರೇ ಸ್ಪರ್ಧೆಗಿಳಿದರೂ ಬೆಂಬಲಿಸುವಂತೆ ಮತದಾರರಿಗೆ ಮನವಿ ಮಾಡುತ್ತಿದ್ದಾರೆ. ಇದರ ನಡುವೆಯೇ ಕಳೆದೆರಡು ದಿನಗಳಿಂದ ಭವಾನಿ ರೇವಣ್ಣ ಅವರೂ ಕ್ಷೇತ್ರದ ವಿವಿಧ ಗ್ರಾ.ಪಂ.ಗಳಲ್ಲಿ ಕಾರ್ಯಕರ್ತರ ಸಭೆ ನಡೆಸುತ್ತಿದ್ದು, ಮಾಜಿ ಸಚಿವ ಎಚ್‌.ಡಿ. ರೇವಣ್ಣ, ಸಂಸದ ಪ್ರಜ್ವಲ್‌ ರೇವಣ್ಣ, ಮಾಜಿ ಶಾಸಕ ಬಿ.ವಿ. ಕರೀಗೌಡ ಮತ್ತಿತರ ಮುಖಂಡರು ಪಾಲ್ಗೊಂಡು ಭವಾನಿ ಜತೆ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ.

ಈ ಎಲ್ಲ ಬೆಳವಣಿಗೆಗಳಿಂದ ಹಾಸನ ಕ್ಷೇತ್ರ ಭಾರೀ ಕುತೂಹಲ ಕೆರಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next