Advertisement

ಶಿವಮೊಗ್ಗದಲ್ಲಿ ಜೆಡಿಎಸ್ ಮತಬೇಟೆ; ಮಂಡ್ಯದಲ್ಲಿ ಮತ್ತೆ “ಕೈ”ಗೆ IT ಶಾಕ್!

09:04 AM Apr 04, 2019 | Nagendra Trasi |

ಮಂಡ್ಯ: ಲೋಕಸಭಾ ಚುನಾವಣಾ ಅಖಾಡ ರಂಗೇರತೊಡಗಿದ್ದು, ಶಿವಮೊಗ್ಗದಲ್ಲಿ ಜೆಡಿಎಸ್ ಅಭ್ಯರ್ಥಿ ಮಧು ಬಂಗಾರಪ್ಪ ಬುಧವಾರ ನಾಮಪತ್ರ ಸಲ್ಲಿಸಿದ್ದಾರೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಪರ ಸ್ಯಾಂಡಲ್ ವುಡ್ ನ ನಟ ದರ್ಶನ್ ಹಾಗೂ ಯಶ್ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದಾರೆ. ಮತ್ತೊಂದೆಡೆ ಮಂಡ್ಯದಲ್ಲಿ ಕಾಂಗ್ರೆಸ್ ನಾಯಕ ಎಂಎಸ್ ಆತ್ಮಾನಂದ ಮನೆ ಮೇಲೆ ಐಟಿ ದಾಳಿ ನಡೆದಿದೆ.

Advertisement

ಇತ್ತೀಚೆಗೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಜೆಡಿಎಸ್ ಮುಖಂಡರ ನಿವಾಸ, ಕಚೇರಿಗಳ ಮೇಲೆ ದಾಳಿ ನಡೆಸಿದ್ದಕ್ಕೆ ಕಾಂಗ್ರೆಸ್, ಜೆಡಿಎಸ್ ನಾಯಕರು ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದರು. ದೋಸ್ತಿಗಳ ಧರಣಿ, ಪ್ರತಿಭಟನೆ ನಡುವೆಯೇ ಐಟಿ ಅಧಿಕಾರಿಗಳು ದಾಳಿಯನ್ನು ಮುಂದುವರಿಸಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ನಾಯಕ ಎಂಎಸ್ ಆತ್ಮಾನಂದ ಮನೆ ಮೇಲೆ ದಾಳಿ ನಡೆಸಿದ ಐಟಿ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ವಹಿವಾಟು, ವ್ಯವಹಾರಗಳ ಬಗ್ಗೆ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎಂದು ವರದಿ ತಿಳಿಸಿದೆ.

ನಮ್ಮವರೆಲ್ಲಾ ನ್ಯಾಯಬದ್ಧವಾಗಿಯೇ ಇದ್ದಾರೆ:ಡಿಕೆಶಿ

ನಮ್ಮವರೆಲ್ಲಾ ನ್ಯಾಯಬದ್ಧವಾಗಿಯೇ ಇದ್ದಾರೆ. ರಾಜಕೀಯವಾಗಿ ನಮ್ಮ ಜನರನ್ನು ಕಟ್ಟಿ ಹಾಕಲು ಮುಂದಾಗುತ್ತಿದ್ದಾರೆ. ಯಾವುದೇ ಕಾರಣಕ್ಕೂ ಸಾಂವಿಧಾನಿಕ ಸಂಸ್ಥೆಗಳ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳಬೇಡಿ ಎಂದು ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next