Advertisement

ಹುಣಸೂರು ಉಪಚುನಾವಣೆಯಲ್ಲಿ ಜೆಡಿಎಸ್ ಗೆ ಸೋಲು: ಜೆಡಿಎಸ್ ಶಾಸಕನ ಭವಿಷ್ಯ

09:58 AM Sep 06, 2019 | keerthan |

ಮೈಸೂರು: ಹುಣಸೂರು ಉಪಚುನಾವಣೆ ನಡೆದರೆ ಜೆಡಿಎಸ್ ಸೋಲುತ್ತದೆ. ಕಾಂಗ್ರೆಸ್ ಅಭ್ಯರ್ಥಿ ಅಲ್ಲಿ ಗೆಲ್ಲುತ್ತಾರೆ ಎಂದು ಜೆಡಿಎಸ್ ಶಾಸಕ ಜಿ.ಟಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ.

Advertisement

ಮೈಸೂರಿನಲ್ಲಿ ಮಾತನಾಡಿದ ಅವರು, ಹುಣಸೂರು ಕ್ಷೇತ್ರಕ್ಕೆ ಉಪ ಚುನಾವಣೆ ನಡೆದರೆ ನನ್ನ ಮಗನನ್ನು ಅಲ್ಲಿಂದ ಸ್ಪರ್ಧಿಸುವಂತೆ ಹೆಚ್.ಡಿ.ಕುಮಾರಸ್ವಾಮಿ ಕೇಳಿದ್ದರು. ನಾನು ಇಲ್ಲ ಎಂದಿದ್ದೇನೆ. ನನ್ನ ಮಗ ಬೇಕಾದರೆ ಚಾಮುಂಡೇಶ್ವರಿ ಕ್ಷೇತ್ರದಿಂದ ಮುಂದೆ ಸ್ಪರ್ಧೆ ಮಾಡಲಿ. ಸದ್ಯಕ್ಕೆ ನಾವು ಯಾವ ಉಪ ಚುನಾವಣೆಯಲ್ಲೂ ಸ್ಪರ್ಧೆ ಮಾಡುತ್ತಿಲ್ಲ ಎಂದು ಮಾಜಿ ಸಚಿವ ಜಿ.ಟಿ.ದೇವೆಗೌಡ ಹೇಳಿದರು.

ಸಚಿವನಾಗಿದ್ದಾಗ ಕ್ಷಣ ಕ್ಷಣಕ್ಕೂ ಅವಮಾನ ಮತ್ತು ನೋವು ಉಣ್ಣುತ್ತಿದ್ದೆ. ನಾನು ಉನ್ನತ ಶಿಕ್ಷಣ ಸಚಿವ ಸ್ಥಾನ ಬೇಡ ಎಂದು ಮುನಿಸಿಕೊಂಡಾಗ ಜಿ.ಟಿ.ದೇವೆಗೌಡ ನಮ್ಮಿಂದ ಇದೆ ರೀತಿ ದೂರವಾಗಲಿ ಎಂದು ಕಾಯುತ್ತಿದ್ದರು. ಮಂತ್ರಿ ಸ್ಥಾನ ತೆಗೆದುಕೊಳ್ಳದೆ ವಾಪಸ್ಸು ಹೋಗಲಿ ಎಂದು ಕಾಯುತ್ತಿದ್ದರು. ನಾನು ಮಾತ್ರ ಈ ಸರ್ಕಾರ ಉಳಿಸಲು ಕೊನೆ ಕ್ಷಣವರೆಗೂ ಹೋರಾಡಿದೆ. ಕುಮಾರಸ್ವಾಮಿಯನ್ನು ಸಿಎಂ ಮಾಡಲು ಉಳಿಸಲು ನಾನು ಶತ ಪ್ರಯತ್ನ ಮಾಡಿದ್ದೇನೆ ಎಂದು ನೋವು ತೋಡಿಕೊಂಡರು.

ಪ್ರಜಾಪ್ರಭುತ್ವದ ಮಾರಕವಾದವರು ರಾಜಕಾರಣಕ್ಕೆ ಬಂದು ನಮ್ಮಂತಹ ರಾಜಕಾರಣಿಗಳಿಗೆ ಮಾರಕವಾದರು. ನಾನು ಈಗ ಬಹಳ ಆರಾಮಾಗಿದ್ದೇನೆ. ಯಾವ ಅವಮಾನವು ಇಲ್ಲ,ನೋವೂ ಇಲ್ಲ. ಈಗ ಜೆಡಿಎಸ್ ಸಂಘಟನೆ ಪಟ್ಟಿಯಲ್ಲಿ ನನ್ನ ಹೆಸರಿಲ್ಲದ ಕಾರಣ ತಲೆಯ ಮೇಲಿದ್ದ ದೊಡ್ಡ ಬಂಡೆ ಇಳಿದಂತಾಗಿದೆ ಎಂದರು.

ಮುಂದುವರಿದು ಮಾತನಾಡಿದ ಜಿ ಟಿ ದೇವೇಗೌಡ, ಚುನಾವಣಾ ರಾಜಕಾರಣದಿಂದ ನಿವೃತ್ತಿ‌ಪಡೆದು ಮಗನಿಗೆ ಬಿಟ್ಟುಕೊಡುತ್ತಿದ್ದೇನೆ. ಈಗ ಬಡವರ ಸೇವೆ ಮಾಡಿಕೊಂಡು ನೆಮ್ಮದಿಯಾಗಿದ್ದೇನೆ ಎಂದರು.

Advertisement

ದಸರಾದಲ್ಲಿ ಬಿಜೆಪಿಯವರ ಜೊತೆ ಕೂರೋಲ್ಲ ಎಂಬ ಸಾ.ರಾ.ಮಹೇಶ್ ಹೇಳಿಕೆ ವಿಚಾರಕ್ಕೆ ಕೇಳಲಾದ ಪ್ರಶ್ನೆಗೆ, ನಾನು ಸಾ.ರಾ.ಮಹೇಶ್‌ರನ್ನ ಬಹು ಹತ್ತಿರದಿಂದ ನೋಡಿದ್ದೇನೆ. ಅವರು ಬಿಜೆಪಿಯಲ್ಲಿದ್ದಾಗ ನಂತರ ಜೆಡಿಎಸ್ ಬಂದಾಗ, ಸಿಎಂ ಜೊತೆ ಇದ್ದಾಗಲೂ ನೋಡಿದ್ದೇನೆ. ಅವರ ಬಗ್ಗೆ ನಾನು ಕಾಮೆಂಟ್ ಮಾಡೋದೆ ಇಲ್ಲ ಎಂದು ಜಿ.ಟಿ.ದೇವೇಗೌಡ ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next