Advertisement

karnataka polls: ಜೆಡಿಎಸ್‌ ಯಾವತ್ತೂ ಅಧಿಕಾರಕ್ಕೆ ಬರಲ್ಲ: ಸಿದ್ದರಾಮಯ್ಯ

10:03 PM May 01, 2023 | Team Udayavani |

ಪಾವಗಡ: ರಾಜ್ಯದಲ್ಲಿ ಬಿಜೆಪಿ ಹಾಗೂ ಜೆಡಿಸ್‌ ಪಕ್ಷಗಳು ಯಾವುದೇ ಕಾರಣಕ್ಕೂ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಭಾರೀ ಬಹುಮತದಿಂದ ಸರ್ಕಾರ ರಚನೆ ಮಾಡಲಿದೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

Advertisement

ಸೋಮವಾರ ಪಟ್ಟಣದ ಚಳ್ಳಕೆರೆ ಕ್ರಾಸ್‌ ಬಳಿ ಕಾಂಗ್ರೆಸ್‌ ವತಿಯಿಂದ ಅಯೋಜಿಸಿದ್ದ ಬೃಹತ್‌ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದರು. ಜೆಡಿಎಸ್‌ ಯಾವತ್ತೂ ಅಧಿಕಾರಕ್ಕೆ ಬರುವುದಿಲ್ಲ. ಈ ಬಾರಿ ಯಾವುದೇ ಪಕ್ಷಕ್ಕೆ ಬಹುಮತ ಬರಬಾರದು ಎಂದು ದೇವಸ್ಥಾನಗಳಲ್ಲಿ ಪೂಜೆ, ಪುನಸ್ಕಾರ, ಹೋಮಗಳನ್ನು ಮಾಡಿಸುತ್ತಿದ್ದಾರೆ. ಅವರಿಗೆ ಬರುವುದು ಕೇವಲ 25 ಸೀಟು ಮಾತ್ರ ಎಂದರು.

ಪ್ರಧಾನಿ ಮೋದಿ ಮಾತನಾಡಿದರೆ ಸಾಕು ಅಚ್ಛೇ ದಿನ್‌ ಎನ್ನುತ್ತಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಾರಿಗೆ ಅಚ್ಛೇ ದಿನ್‌ ಅಗಿದೆ ಎಂದು ಜನರು ಹೇಳಬೇಕು. ಪೂರ್ವದಲ್ಲಿ ಸೂರ್ಯ ಹುಟ್ಟುವುದು ಎಷ್ಟು ಸತ್ಯವೋ ಈ ಬಾರಿ ರಾಜ್ಯದಲ್ಲಿ ಕಾಂಗ್ರೆಸ್‌ ಅಧಿಕಾರಕ್ಕೆ ಬರುವುದೂ ಅಷ್ಟೇ ಸತ್ಯ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next