Advertisement

ಜೆಡಿಎಸ್‌ ಮಹಿಳಾ ಸಮಾವೇಶ: ಚರ್ಚೆ

11:52 PM Jul 29, 2019 | Team Udayavani |

ಬೆಂಗಳೂರು: ಮುಂದಿನ ತಿಂಗಳು ಜೆಡಿಎಸ್‌ ಮಹಿಳಾ ಸಮಾವೇಶ ಆಯೋಜಿಸುವ ಸಂಬಂಧ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಸೋಮವಾರ ಪಕ್ಷದ ಕಚೇರಿಯಲ್ಲಿ ಮಹಿಳಾ ಮುಖಂಡರು ಹಾಗೂ ನಾಯಕರ ಜತೆ ಸಮಾಲೋಚನೆ ನಡೆಸಿದರು.

Advertisement

ಆ. 7ರಂದು ಮಹಿಳಾ ಸಮಾವೇಶ ಹಿನ್ನೆಲೆಯಲ್ಲಿ ಈಗಿನಿಂದಲೇ ಸಿದ್ಧತೆ ಆರಂಭಿಸುವಂತೆ ಸೂಚಿಸಿದರು. ಸಮಾವೇಶವು ಯಶಸ್ವಿಯಾಗಲು ಎಲ್ಲ ಜಿಲ್ಲೆ ಹಾಗೂ ತಾಲೂಕುಗಳಿಂದ ಮಹಿಳಾ ಕಾರ್ಯಕರ್ತರನ್ನು ಹೆಚ್ಚಿನ ಸಂಖ್ಯೆಯಲ್ಲಿ ಕರೆತರಬೇಕು ಎಂದು ಸೂಚಿಸಿದರು.

ಸಮ್ಮಿಶ್ರ ಸರ್ಕಾರ ಪತನಗೊಂಡ ಬಗ್ಗೆ ತಲೆಕೆಡಿಸಿಕೊಳ್ಳುವುದು ಬೇಡ. ಕಳೆದ ಹದಿನಾಲ್ಕು ತಿಂಗಳಲ್ಲಿ ಎಚ್‌.ಡಿ.ಕುಮಾರಸ್ವಾಮಿ ರೈತರ ಸಾಲಮನ್ನಾ ಸೇರಿ ಸಾಕಷ್ಟು ಯೋಜನೆಗಳನ್ನು ಕೊಟ್ಟಿದ್ದಾರೆ. ಇದರ ಬಗ್ಗೆ ಜನರಿಗೆ ತಿಳಿಸುವ ಕೆಲಸವಾಗಬೇಕು. ಯಾವುದೇ ಸಮಯದಲ್ಲಿ ಮಧ್ಯಂತರ ಚುನಾವಣೆ ಎದುರಾದರೂ ಎದುರಿಸಲು ನಾವು ತಯಾರಾಗಬೇಕು. ಪಕ್ಷದಲ್ಲಿ ಮಹಿಳೆಯರಿಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next