Advertisement

ಜೆಡಿಯು ರಾಜ್ಯಾಧ್ಯಕ್ಷ ನಾಡಗೌಡರಿಗೆ ಮಾತೃ ವಿಯೋಗ

06:40 AM Nov 22, 2018 | Team Udayavani |

ಬಾಗಲಕೋಟೆ: ಮಾಜಿ ಸಹಕಾರಿ ಸಚಿವ, ಶಿಕ್ಷಣ ಪ್ರೇಮಿ ದಿ| ಪಿ.ಎಂ.ನಾಡಗೌಡರ ಪತ್ನಿ, ಬಾಗಲಕೋಟೆ ಕಿತ್ತೂರು ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕಿನ ಅಧ್ಯಕ್ಷೆ ಕಾಶೀಬಾಯಿ ಪರ್ವತಗೌಡ ನಾಡಗೌಡ (88) ಬುಧವಾರ ಬೆಳಗ್ಗೆ ನಿಧನರಾದರು.

Advertisement

ಮೃತರು ವಿಧಾನ ಪರಿಷತ್‌ ಮಾಜಿ ಸದಸ್ಯ, ಜೆಡಿಯು ರಾಜ್ಯಾಧ್ಯಕ್ಷ ಡಾ| ಮಲ್ಲಣ್ಣ ನಾಡಗೌಡ, ವಿಜಯಕುಮಾರ ನಾಡಗೌಡ, ನಿವೃತ್ತ ಕಾರ್ಯ ನಿರ್ವಾಹಕ ಅಭಿಯಂತರ ಸಂಗಮೇಶ ನಾಡಗೌಡ, ಮೋಹನ ನಾಡಗೌಡ, ಉದ್ಯಮಿ ವಿನೋದ ನಾಡಗೌಡ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. 

ದಿ.ಎಸ್‌.ನಿಜಲಿಂಗಪ್ಪ, ವೀರೇಂದ್ರ ಪಾಟೀಲ ಅವರ ಕುಟುಂಬಕ್ಕೆ ಆಪ್ತರಾಗಿದ್ದ ದಿ| ಕಾಶೀಬಾಯಿ ಅವರು, ಕೃಷಿ ಚಟುವಟಿಕೆ ಜತೆಗೆ ಸಹಕಾರಿ ರಂಗದಲ್ಲಿ ಕೆಲಸ ಮಾಡಿದ್ದರು. ಕಿತ್ತೂರು ಚನ್ನಮ್ಮ ಮಹಿಳಾ ಸಹಕಾರಿ ಬ್ಯಾಂಕಿಗೆ ಸುಮಾರು 15 ವರ್ಷಗಳಿಂದ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು.

ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ನೆರವೇರಿತು. ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ, ಶಾಸಕ ಡಾ| ವೀರಣ್ಣ ಚರಂತಿಮಠ, ವಿಧಾನ ಪರಿಷತ್‌ ಸದಸ್ಯ ಎಸ್‌.ಆರ್‌. ಪಾಟೀಲ, ಹಣಮಂತ ನಿರಾಣಿ, ಮಾಜಿ ಸಚಿವ, ಡಿಸಿಸಿ ಬ್ಯಾಂಕ್‌ ಅಧ್ಯಕ್ಷ ಅಜಯಕುಮಾರ ಸರನಾಯಕ, ಮಾಜಿ ಸಚಿವ ಎಚ್‌.ವೈ. ಮೇಟಿ ಹಾಗೂ ಇತರರು ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದರು. ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಜಗದ್ಗುರು ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ, ಕೆರೂರ ಚರಂತಿಮಠದ ಸ್ವಾಮೀಜಿ, ಶಾಸಕ ಗೋವಿಂದ ಕಾರಜೋಳ, ಸಿದ್ದು ಸವದಿ ಸೇರಿದಂತೆ ಹಲವು ಗಣ್ಯರು ಅಂತಿಮ ನಮನ ಸಲ್ಲಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next