Advertisement

ಜೀವನದಲ್ಲಿ ಜಿಗುಪ್ಸೆ: ವಿವಾಹಿತೆ ನೇಣಿಗೆ ಶರಣು

04:20 PM Jul 22, 2023 | Team Udayavani |

ಕುಷ್ಟಗಿ: ಜೀವನದಲ್ಲಿ ಜಿಗುಪ್ಸೆಗೊಂಡಿದ್ದ ವಿವಾಹಿತೆ ಗಂಡನ ಮನೆಯಲ್ಲಿ ಶನಿವಾರ ನೇಣಿಗೆ ಶರಣಾದ ಘಟನೆ ನಡೆದಿದೆ.

Advertisement

ಲಕ್ಷ್ಮಿ ಪರಶುರಾಮ ಹೊನ್ನಳ್ಳಿ (20) ವರ್ಷ ಆತ್ಮಹತ್ಯೆ ಮಾಡಿಕೊಂಡ ನತದೃಷ್ಟೆ. ಕಳೆದ ಒಂದೂವರೆ ವರ್ಷದ ಹಿಂದೆ ಮದುವೆಯಾಗಿದ್ದು ಆಕೆಗೆ ಆಗಾಗ್ಗೆ ಹೊಟ್ಟೆ ನೋವಿನಿಂದ ಬಳಲುತ್ತಿದ್ದಳು. ಹೊಟ್ಟೆ ನೋವು ಸಹಿಸದ ಲಕ್ಷ್ಮೀ ಶನಿವಾರ ಗಂಡನ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಮನೆಯ ಬೆಳಕಿಂಡಿಯ ಸರಳಿಗೆ ನೇಣು ಹಾಕಿಕೊಂಡಿದ್ದಾಳೆ.

ನಂತರ ನೇಣಿಗೆ ಶರಣಾದ ಲಕ್ಷ್ಮಿಯನ್ನು ಕುಷ್ಟಗಿ ತಾಲೂಕಾ ಸರ್ಕಾರಿ ಆಸ್ಪತ್ರೆಗೆ ಶವಗಾರಕ್ಕೆ ತಂದು ಮರಣೋತ್ತರ ಪರೀಕ್ಷೆ ನಡೆಸಿ ನಂತರ ಶವವನ್ನು ಕುಟುಂಬದವರಿಗೆ ಹಸ್ತಾಂತರಿಸಲಾಗಿದೆ. ಹನುಮಸಾಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಪಿಎಸೈ ಅಶೋಕ ಬೇವೂರು ಮಾಹಿತಿ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next