Advertisement

ಜೆಟ್‌ ಏರ್‌ವೇಸ್‌ ಸಿಬ್ಬಂದಿ ಪ್ರತಿಭಟನೆ

09:16 AM Apr 23, 2019 | Lakshmi GovindaRaju |

ಬೆಂಗಳೂರು: ಆರ್ಥಿಕ ನಷ್ಟದಿಂದ ಹಾರಾಟ ನಿಲ್ಲಿಸಿರುವ ಜೆಟ್‌ ಏರ್‌ವೇಸ್‌ ವಿಮಾನಯಾನ ಸಂಸ್ಥೆ ಉಳಿಸುವಂತೆ ನೌಕರರು ಸೋಮವಾರ ನಗರದ ಪುರಭವನ ಎದುರು ಪ್ರತಿಭಟನೆ ನಡೆಸಿದರು.

Advertisement

ದಶಕಗಳಿಂದ ವಿಮಾನಯಾನ ಸೇವೆ ನೀಡುತ್ತಿದ್ದ ಜೆಟ್‌ ಏರ್‌ವೇಸ್‌ ಆರ್ಥಿಕ ತೊಂದರೆಗೆ ಸಿಲುಕಿದ್ದು, ಏಕಾಏಕಿ ವಿಮಾನಗಳ ಹಾರಾಟ ನಿಲ್ಲಿಸಲಾಗಿದೆ. ಇದರಿಂದ ಅಂದಾಜು 20 ಸಾವಿರ ನೌಕರರ ಉದ್ಯೋಗದಿಂದ ವಂಚಿತರಾಗಲಿದ್ದಾರೆ.

ನೌಕರರು ಮತ್ತು ಅವರ ಕುಟುಂಬಗಳು ಬೀದಿಗೆ ಬೀಳಲಿವೆ. ಈಗಾಗಲೇ ಕಳೆದ ಮೂರ್‍ನಾಲ್ಕು ತಿಂಗಳಿಂದ ನೌಕರರ ವೇತನವನ್ನೂ ತಡೆಹಿಡಿಯಲಾಗಿದೆ. ಇದರಿಂದ ತೀವ್ರ ಸಂಕಷ್ಟ ಎದುರಿಸುವಂತಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರ ಸರ್ಕಾರ ಬ್ಯಾಂಕ್‌ಗಳ ನೆರವಿನಿಂದ ಜೆಟ್‌ ಏರ್‌ವೇಸ್‌ ಉಳಿವಿಗೆ ಮುಂದಾಗಿದೆ. ಬಿಡ್‌ ಪ್ರಕ್ರಿಯೆ ವಿಳಂಬದಿಂದ ಸಮಸ್ಯೆ ಹೆಚ್ಚಾಗುತ್ತಿದೆ. ಕೇಂದ್ರ ಸರ್ಕಾರ ತ್ವರಿತಗತಿಯಲ್ಲಿ ಬಿಡ್‌ ಪ್ರಕ್ರಿಯೆ ಮುಗಿಸಿ ಜೆಟ್‌ ಏರ್‌ವೇಸ್‌ಗೆ ಮರುಜೀವ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next