Advertisement

ಚಿನ್ನಾಭರಣ ಕಳ್ಳತನ: ಆರೋಪಿ ಬಂಧನ

10:34 PM Mar 29, 2023 | Team Udayavani |

ವಿಟ್ಲ: ಕೆಲಸದವ ಅಂಗಡಿ ಮಾಲಕನ ಮನೆಯಲ್ಲಿ ಚಿನ್ನಾಭರಣ ಕಳ್ಳತನ ನಡೆಸಿದ ಪ್ರಕರಣ ವಿಟ್ಲ ಕಸಬ ಗ್ರಾಮದ ರಂಗರಮಜಲು ಎಂಬಲ್ಲಿ ನಡೆದಿದ್ದು ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Advertisement

ಮನು ಅಲಿಯಾಸ್‌ ಮನೋಹರ ಬಂಧಿತ ಆರೋಪಿ.

ಜ 20 ರಿಂದ ಮಾ 20 ರವರೆಗೆ ಎರಡು ತಿಂಗಳ ಕಾಲ ವಿಟ್ಲಕಸಬಾ ಗ್ರಾಮದ ರಂಗರಮಜಲು ಮುರಳೀಧರ ಅವರ ಮನೆಯಲ್ಲಿ ಯಾರೂ ಇರಲಿಲ್ಲ. ಈ ಸಂದರ್ಭವನ್ನು ಬಳಸಿಕೊಂಡ ಆರೋಪಿಯು ಒಟ್ಟು 3,20,000 ಮೌಲ್ಯದ ಒಟ್ಟು 64 ಗ್ರಾಂ ತೂಕದ ಚಿನ್ನಾಭರಣಗಳನ್ನು ಕಳ್ಳತನಗೈದಿದ್ದ.

ಈ ಕುರಿತು ಮುರಳೀಧರ ಅವರು ಠಾಣೆಗೆ ದೂರು ನೀಢಿದ್ದು, ವಿಚಾರಿಸಿದಾಗ ತಪ್ಪೊಪ್ಪಿಕೊಂಡ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next