Advertisement

ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಕ್ಕೆ ಬೆಂಕಿ ಹಚ್ಚಿ ಯುವತಿಯನ್ನೇ ಸುಟ್ಟು ಕೊಂದ ಕಿರಾತಕ

08:06 PM Oct 07, 2022 | Team Udayavani |

ದುಮ್ಕಾ:ಮದುವೆ ಪ್ರಸ್ತಾಪ ತಿರಸ್ಕರಿಸಿದ್ದಾಳೆ ಎಂಬ ಕಾರಣಕ್ಕೆ ಕಿಡಿಗೇಡಿಯೊಬ್ಬ ಯುವತಿಗೆ ಬೆಂಕಿ ಹಚ್ಚಿ ಆಕೆಯ ಸಾವಿಗೆ ಕಾರಣನಾಗಿದ್ದಾನೆ. ಭಾರೀ ಪ್ರಮಾಣದಲ್ಲಿ ಸುಟ್ಟ ಗಾಯಗೊಳೊಂದಿಗೆ ರಾಂಚಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವತಿ ಅಸುನೀಗಿದ್ದಾಳೆ.

Advertisement

ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವೇಂದರ್‌ ಠಾಕೂರ್‌ ಎಂಬಾತನನ್ನು ಬಂಧಿಸಲಾಗಿದೆ. ದುಮ್ಕಾ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ.

ಆರೋಪಿಗೆ ಈ ಹಿಂದೆಯೇ ಮದುವೆಯಾಗಿದ್ದರೂ, ಯುವತಿಯನ್ನು ಪೀಡಿಸುತ್ತಿದ್ದ. ಆಸ್ಪತ್ರೆಯಲ್ಲಿ ಯುವತಿಯ ಹೇಳಿಕೆಯನ್ನೂ ದಾಖಲಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್‌ಪಿ ಅಂಬರ್‌ ಲಾಕ್ರಾ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next