Advertisement
ಈ ಕುರಿತಂತೆ ಜಿಗ್ನೇಶ್ ಮೇವಾನಿ ಹಾಗೂ ಟಿ. ಶಫಿಯುಲ್ಲಾ ಸಲ್ಲಿಸಿದ್ದ ಅರ್ಜಿಯು ನ್ಯಾ.ಅರವಿಂದ್ ಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠದ ಮುಂದೆ ವಿಚಾರಣೆಗೆ ಬಂದಿತ್ತು. ಕೆಲ ಕಾಲ ವಾದ ಆಲಿಸಿದ ನ್ಯಾಯಪೀಠ, ಅರ್ಜಿ ವಜಾಗೊಳಿಸಿ ಆದೇಶಿಸಿತು.
Related Articles
Advertisement
ಈ ಸಂದರ್ಭದಲ್ಲಿ ಕರ್ನಾಟಕದ ಯುವ ಜನತೆಯ ಪಾತ್ರ ಬಹಳ ಮುಖ್ಯವಾಗಿದೆ. ಪ್ರಧಾನಿಯವರ ಪ್ರಚಾರ ಸಭೆಗೆ ನುಗ್ಗಿ ಕುರ್ಚಿಗಳನ್ನು ಎಸೆದಾಡಿ ಗಲಾಟೆ ಎಬ್ಬಿಸಿ, ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡುವ ಭರವಸೆ ಏನಾಯಿತು ಎಂದು ಪ್ರಶ್ನಿಸಿ, ಉತ್ತರ ಕೊಡದಿದ್ದರೆ ಹಿಮಾಲಯಕ್ಕೆ ಹೋಗಿ ರಾಮ ಮಂದಿರ ಹಿಡಿದು ಗಂಟೆ ಬಾರಿಸುತ್ತ ಕುಳಿತುಕೊಳ್ಳುವಂತೆ ಅವರಿಗೆ ಹೇಳಿ’ ಎಂದು ಭಾಷಣ ಮಾಡಿದ್ದರು.
ಈ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿ ತಂಡದ ಅಧಿಕಾರಿ ಟಿ. ಜಯಂತ್ ಚಿತ್ರದುರ್ಗ ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅದರಂತೆ, “ಜನರಲ್ಲಿ ದ್ವೇಷ ಭಾವನೆ ಮೂಡುವಂತೆ ಮಾಡುವ ಮೂಲಕ ಪ್ರಧಾನಿ ಕಾರ್ಯಕ್ರಮದಲ್ಲಿ ಗುಂಪು ಕಟ್ಟಿಕೊಂಡು ಗಲಾಟೆ ಎಬ್ಬಿಸುವಂತೆ ಪ್ರಚೋದನೆ ನೀಡಿದ್ದಾರೆ.
ಈ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂ ಸಿದ್ದಲ್ಲದೇ ಸಂವಾದ ಕಾರ್ಯಕ್ರಮಕ್ಕೆ ಅನುಮತಿ ನೀಡುವಾಗ ವಿಧಿಸಲಾಗಿದ್ದ ನಿರ್ಬಂಧಗಳನ್ನೂ ಉಲ್ಲಂ ಸಿದ್ದಾರೆಂದು ದೂರಲಾಗಿತ್ತು. ಜಿಗ್ನೇಶ್ ಮೇವಾನಿ ಹಾಗೂ ಶಫಿವುಲ್ಲಾ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಚಿತ್ರದುರ್ಗದ ಜೆಎಂಎಫ್ಸಿ ನ್ಯಾಯಾಲಯ ವಿಚಾರಣೆಗೆ ಅನುಮತಿ ನೀಡಿ ಸಮನ್ಸ್ ಜಾರಿಗೊಳಿತ್ತು.