Advertisement

ಬೆಂಗಳೂರು: ವಿವಾಹ ಪ್ರಸ್ತಾಪ ನಿರಾಕರಿಸಿದ ವಿಚ್ಛೇದಿತೆಯ ಮೇಲೆ ಆ್ಯಸಿಡ್‌ ದಾಳಿ

04:12 PM Jun 10, 2022 | Team Udayavani |

ಬೆಂಗಳೂರು: ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದ್ದಕ್ಕಾಗಿ ಮಹಿಳೆಯ ಮೇಲೆ ಭಗ್ನ ಪ್ರೇಮಿಯೊಬ್ಬ ಆ್ಯಸಿಡ್‌ ಎರಚಿದ ಘಟನೆ ಶುಕ್ರವಾರ ಬೆಳಗ್ಗೆ ನಗರದ ಜೆಪಿ ನಗರದ ಸಾರಕ್ಕಿ ರಸ್ತೆ ಜಂಕ್ಷನ್‌ನಲ್ಲಿ ನಡೆದಿದೆ.

Advertisement

ದಾಳಿಯಿಂದ  32 ವರ್ಷದ ಮಹಿಳೆಯ ಬಲಗಣ್ಣಿಗೆ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಪಿ ಅಹ್ಮದ್ (36) ಎಂಬಾತನನ್ನು ಬಂಧಿಸಲಾಗಿದೆ.

ವಿಚ್ಛೇದನ ಪಡೆದಿರುವ ಮಹಿಳೆ ಮೂವರು ಮಕ್ಕಳೊಂದಿಗೆ ವಾಸವಾಗಿದ್ದರು. ಇಬ್ಬರು ಅಗರಬತ್ತಿ ಉತ್ಪನ್ನಗಳನ್ನು ತಯಾರಿಸುವ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದು, ಕಳೆದ ಮೂರು ವರ್ಷಗಳಿಂದ ಪರಸ್ಪರ ಪರಿಚಿತರು ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಕಳೆದ ಹಲವು ವಾರಗಳಿಂದ ಅಹ್ಮದ್ ತನ್ನದೇ ಸಮುದಾಯದ ಮಹಿಳೆಯನ್ನು ಮದುವೆಯಾಗುವಂತೆ ಪೀಡಿಸುತ್ತಿದ್ದ.ಆದಾಗ್ಯೂ, ವಳು ಪದೇ ಪದೇ ಅವನ ಮನವಿಯನ್ನು ತಿರಸ್ಕರಿಸಿದ್ದಳು. ಶುಕ್ರವಾರ ಆಕೆಯ ಮೇಲೆ ಆ್ಯಸಿಡ್‌ ಎರಚಿದ್ದಾನೆ.

ಎರಡು ತಿಂಗಳ ಹಿಂದೆ ನಗರದಲ್ಲಿ ಮಹಿಳೆಯೊಬ್ಬರ ಮೇಲೆ ಆ್ಯಸಿಡ್‌ ದಾಳಿ ನಡೆದ ಬೆನ್ನಲ್ಲೇ ಈ ಘಟನೆ ನಡೆದಿದೆ. ನಂತರ ಆರೋಪಿಯನ್ನು ತಮಿಳುನಾಡಿನಿಂದ ಬಂಧಿಸಲಾಗಿತ್ತು.

Advertisement

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next