Advertisement

ಜಿಂದಾಲ್ ಚೆಕ್‌ ಪಡೆದದ್ದು ಏಕೆ?

01:21 AM Jun 18, 2019 | Team Udayavani |

ಬೆಂಗಳೂರು: ಜಿಂದಾಲ್ ಭೂಮಿ ಪರಭಾರೆ ವಿಚಾರದಲ್ಲಿ ಈಗ ‘ಕಿಕ್‌ಬ್ಯಾಕ್‌’ ವಿಚಾರ ಭಾರೀ ಸದ್ದು ಮಾಡುತ್ತಿದೆ.

Advertisement

ಬಿ.ಎಸ್‌.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ, ಜಿಂದಾಲ್ ನಿಂದ 20 ಕೋಟಿ ರೂ. ಅನ್ನು ಚೆಕ್‌ ಮೂಲಕ ಪಡೆದಿದ್ದನ್ನು ನಾನೇ ಬಹಿರಂಗಪಡಿಸಿದ್ದೆ ಎಂದು ಸಿಎಂ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ತಮ್ಮ ತವರು ಕ್ಷೇತ್ರ ಚನ್ನಪಟ್ಟಣದಲ್ಲಿ ಮಾತನಾಡಿದ ಕುಮಾರಸ್ವಾಮಿ, ಜಿಂದಾಲ್ ಗೆ ಭೂಮಿ ನೀಡುವ ವಿಚಾರದಲ್ಲಿ ಕಂಪನಿಯೊಂದಿಗೆ ಲೀಸ್‌ ಡೀಡ್‌ ಮಾಡಿಕೊಂಡಿದ್ದು ಯಡಿಯೂರಪ್ಪ. ಈಗ ಅವರೇ ಜಿಂದಾಲ್ಗೆ ಭೂಮಿ ಕೊಡುವ ವಿಚಾರದಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ ಎಂದು ಬಿಜೆಪಿಗೆ ಟಾಂಗ್‌ ನೀಡಿದ್ದಾರೆ.

ಜಿಂದಾಲ್ಗೆ ಭೂಮಿ ನೀಡುವ ರಾಜ್ಯ ಸರ್ಕಾರದ ನಿರ್ಧಾರ ವಿರೋಧಿಸಿ ಅಹೋರಾತ್ರಿ ಧರಣಿ ನಡೆಸಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರು, ರಾಜ್ಯ ಸರ್ಕಾರ ಜಿಂದಾಲ್ ಕಂಪನಿಯಿಂದ ಕಿಕ್‌ಬ್ಯಾಕ್‌ ಪಡೆದಿರುವ ಅನುಮಾನಗಳಿವೆ ಎಂದು ಆರೋಪಿಸಿದ್ದರು.

ರಾಜಕೀಯ ಅಗತ್ಯವಿಲ್ಲ: ಜಿಂದಾಲ್ ಗೆ ಭೂಮಿ ಹಂಚಿಕೆ ವಿಚಾರದಲ್ಲಿ ರಾಜಕೀಯ ಮಾಡ ಬೇಕಾದ ಅಗತ್ಯ ನನಗಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿದ್ದಾರೆ.

Advertisement

ಜಿಂದಾಲ್ ಕಂಪನಿಗೆ ಭೂಮಿ ಪರಭಾರೆ ಮಾಡದಿರುವ ಬಗ್ಗೆ ರಾಜ್ಯ ಸರ್ಕಾರ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಅವರು ತೀರ್ಮಾನ ಮಾಡುವುದೂ ಇಲ್ಲ ಎಂದೂ ಹೇಳಿದ್ದಾರೆ. ಇದೇ ಕಾರಣಕ್ಕಾಗಿಯೇ ಅವರು, ನಾವು ವಾರದ ಹಿಂದೆಯೇ ಪ್ರತಿಭಟನೆಗೆ ನಿರ್ಧರಿಸಿದ್ದರೂ, ಸಂಧಾನಕ್ಕೆ ಕರೆಯಲಿಲ್ಲ. ಆದರೆ, ಅಹೋರಾತ್ರಿ ಧರಣಿ ಮುಗಿಸಿ ಮೆರವಣಿಗೆ ಹೊರಡುವಾಗ ಮಾತುಕತೆಯ ನಾಟಕವಾಡಿದರು ಎಂದು ವ್ಯಂಗ್ಯವಾಡಿದರು. ಈಗ ನನ್ನ ಮೇಲೆ ದೂರುವುದು ಸರಿಯಲ್ಲ ಎಂದು ಬಿಎಸ್‌ವೈ ಹೇಳಿದರು.

ಜಿಂದಾಲ್ ಗೆ ಜಮೀನು ಮಾರಾಟ ಮಾಡುವುದಕ್ಕೆ ವ್ಯಾಪಕ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸಂಪುಟ ಉಪ ಸಮಿತಿ ರಚನೆ ಮಾಡುವಂತೆ ನಾನೇ ಸಲಹೆ ನೀಡಿದ್ದೆ. ನಾನು ಸರ್ಕಾರದ ಭಾಗ ಆಗಿರದ ಹಿನ್ನೆಲೆಯಲ್ಲಿ ಈ ಬಗ್ಗೆ ಮಾತನಾಡಿಲ್ಲ.-ಸಿದ್ದರಾಮಯ್ಯ, ಮಾಜಿ ಸಿಎಂ
ಜಿಂದಾಲ್ ನಿಂದ 20 ಕೋಟಿ ರೂ. ಕಿಕ್‌ಬ್ಯಾಕ್‌ ಅನ್ನು ಚೆಕ್‌ ಮೂಲಕ ಯಡಿಯೂರಪ್ಪ ಪಡೆದಿದ್ದನ್ನು ನಾನೇ ಬಹಿರಂಗ ಪಡಿಸಿದ್ದೆ. ಇದನ್ನು ಮರೆತಿರುವ ಅವರು ನನ್ನ ವಿರುದ್ಧ ಹೋರಾಟ ಮಾಡುತ್ತಿದ್ದಾರೆ.
-ಎಚ್.ಡಿ.ಕುಮಾರಸ್ವಾಮಿ, ಸಿಎಂ
Advertisement

Udayavani is now on Telegram. Click here to join our channel and stay updated with the latest news.

Next