Advertisement

ಕಾಶ್ಮೀರದ ಪಹಾರಿ ಸಮುದಾಯಕ್ಕೆ ಎಸ್‌ಟಿ ಮೀಸಲು ಸೌಲಭ್ಯ?

12:21 AM Oct 04, 2022 | Team Udayavani |

ಶ್ರೀನಗರ/ಜಮ್ಮು: ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ಮೂರು ದಿನಗಳ ಜಮ್ಮು ಮತ್ತು ಕಾಶ್ಮೀರ ಪ್ರವಾಸ ಕೈಗೊಂಡಿದ್ದಾರೆ. ಈ ನಿಟ್ಟಿನಲ್ಲಿ ಅವರು ಸೋಮವಾರವೇ ಜಮ್ಮುವಿಗೆ ಆಗಮಿಸಿದ್ದಾರೆ.

Advertisement

ಮಂಗಳವಾರ ರಜೌರಿಯಲ್ಲಿ, ಬುಧವಾರ ಬಾರಾಮುಲ್ಲಾದಲ್ಲಿ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡುವ ಕಾರ್ಯಕ್ರಮ ಇದೆ. ಈ ಹಿನ್ನೆಲೆಯಲ್ಲಿ ಕೇಂದ್ರಾಡಳಿತ ಪ್ರದೇಶದಾದ್ಯಂತ ಭದ್ರತಾ ವ್ಯವಸ್ಥೆ ಬಿಗಿಗೊಳಿಸಲಾಗಿದೆ.

ಕೇಂದ್ರಾಡಳಿತ ಪ್ರದೇಶದಲ್ಲಿ ಇರುವ ಪಹಾರಿ ಸಮುದಾಯಕ್ಕೆ ಎಸ್‌ಟಿ ಮಾನ್ಯತೆ ನೀಡುವ ಬಗ್ಗೆ ಕೇಂದ್ರ ಗೃಹ ಸಚಿವರು ಘೋಷಣೆ ಮಾಡುವ ಸಾಧ್ಯತೆಗಳು ಇವೆ. ಇದೇ ವಿಚಾರ ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದಲ್ಲಿ ಬಿರುಕು ಸೃಷ್ಟಿಸಿದೆ.

ಆ ಪಕ್ಷದ ನಾಯಕ ಕಫೀಲ್‌ ಉರ್‌ ರೆಹಮಾನ್‌ ಅವರು ರಜೌರಿ, ಬಾರಾಮುಲ್ಲಾದಲ್ಲಿ ಆಯೋಜಿಸಲಾಗಿರುವ ರ್‍ಯಾಲಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸಬೇಕು ಎಂದು ಮನವಿ ಮಾಡಿದ್ದಾರೆ. ಜತೆಗೆ ರಜೌರಿಯಲ್ಲಿ ನ್ಯಾಶನಲ್‌ ಕಾನ್ಫರೆನ್ಸ್‌ ಪಕ್ಷದ ನಾಯಕರು ಪಕ್ಷದ ಹುದ್ದೆಗಳಿಗೆ ರಾಜೀನಾಮೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next