Advertisement

J&K;’ಜೈ ಶ್ರೀ ರಾಮ್’ ಎಂದು ಬರೆದ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕನ ವಿರುದ್ಧ ಕೇಸ್

10:16 PM Aug 26, 2023 | Team Udayavani |

ಕಥುವಾ: ಜಮ್ಮು ಮತ್ತು ಕಾಶ್ಮೀರದ ಕಥುವಾ ಜಿಲ್ಲೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕನೊಬ್ಬ ವಿದ್ಯಾರ್ಥಿಗೆ ಥಳಿಸಿದ ನಂತರ ಶನಿವಾರ ಪ್ರಕರಣ ದಾಖಲಾಗಿದೆ. ತರಗತಿಯ ಕಪ್ಪು ಹಲಗೆಯ ಮೇಲೆ ‘ಜೈ ಶ್ರೀ ರಾಮ್’ ಎಂದು ಬರೆದಿದ್ದರಿಂದ ಥಳಿಸಲಾಗಿದೆ ಎಂದು ಆಸ್ಪತ್ರೆಗೆ ದಾಖಲಾದ ವಿದ್ಯಾರ್ಥಿ ಹೇಳಿದ್ದಾನೆ.ಘಟನೆ ಖಂಡಿಸಿ ಭಾರೀ ಪ್ರತಿಭಟನೆಗಳು ನಡೆದಿವೆ.

Advertisement

ಇದನ್ನೂ ಓದಿ:UP ಸಹಪಾಠಿಯಿಂದಲೇ ಶಿಕ್ಷೆಗೆ ಈಗ ರಾಜಕೀಯದ ಕಾವು: ಶಿಕ್ಷಕಿ ವಿರುದ್ಧ ಕೇಸು

ಆರೋಪಿ ಶಿಕ್ಷಕ ಮತ್ತು ಶಾಲೆಯ ಪ್ರಾಂಶುಪಾಲರ ವಿರುದ್ಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ. ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸಿದ್ದು, ಈ ಕುರಿತು ತನಿಖೆ ನಡೆಸಲು ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಹೇಳಿದ್ದಾರೆ. ಸದಸ್ಯರು ಬನಿಯ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್, ಕಥುವಾ ಉಪ ಮುಖ್ಯ ಶಿಕ್ಷಣ ಅಧಿಕಾರಿ ಮತ್ತು ಖರೋಟೆಯ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯ ಪ್ರಾಂಶುಪಾಲರನ್ನು ಒಳಗೊಂಡಿರುತ್ತಾರೆ.

Advertisement

Udayavani is now on Telegram. Click here to join our channel and stay updated with the latest news.

Next