Advertisement

ಇಬ್ಬರು ಉಗ್ರರ ಹತ್ಯೆ

06:19 PM Sep 26, 2018 | Team Udayavani |

ಶ್ರೀನಗರ: ಜಮ್ಮು-ಕಾಶ್ಮೀರದ ಬಾರಾಮುಲ್ಲಾ ಜಿಲ್ಲೆಯಲ್ಲಿ ಮಂಗಳವಾರ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರನ್ನು ಭದ್ರತಾ ಪಡೆ ಹೊಡೆದುರುಳಿಸಿದೆ. ಬೋಮಾಯಿ ಪ್ರದೇಶದಲ್ಲಿ ಉಗ್ರರು ಅವಿತಿರುವ ಬಗ್ಗೆ ಸುಳಿವು ಸಿಕ್ಕ ಹಿನ್ನೆಲೆಯಲ್ಲಿ ಭದ್ರತಾ ಪಡೆ ಕಾರ್ಯಾಚರಣೆ ನಡೆಸಿದೆ. ಇದೇ ವೇಳೆ, ಎಲ್‌ಒಸಿಯಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರದತ್ತ ಹೋಗಲು ಪ್ರಯತ್ನಿಸಿದ ವ್ಯಕ್ತಿಯೊಬ್ಬನನ್ನು ಸೇನೆಯು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next