Advertisement

ಉಗ್ರರ ದಾಳಿ ಸಂತ್ರಸ್ತರಿಗೆ ಎಂಬಿಬಿಎಸ್‌, ಬಿಡಿಎಸ್‌ ಸೀಟುಗಳ ಮೀಸಲು

08:49 PM Nov 08, 2022 | Team Udayavani |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಯಿಂದ ಮಡಿದವರ ಮಕ್ಕಳಿಗೆ 2022-23ನೇ ಸಾಲಿನ ಎಂಬಿಬಿಎಸ್‌ ಮತ್ತು ಬಿಡಿಎಸ್‌ ಕೋರ್ಸ್‌ನ ಸೀಟುಗಳಲ್ಲಿ ಮೀಸಲಾತಿ ನೀಡಲು ಭಾರತ ಸರ್ಕಾರ ನಿರ್ಧರಿಸಿದೆ.

Advertisement

ಕೇಂದ್ರ ಗೃಹ ಸಚಿವಾಲಯದ ಪತ್ರ ಆಧರಿಸಿ ಜಮ್ಮು ಮತ್ತು ಕಾಶ್ಮೀರ ವೃತ್ತಿಪರ ಪ್ರವೇಶ ಪರೀಕ್ಷೆಗಳ ಮಂಡಳಿ(ಬಿಒಪಿಇಇ) ಈ ಕುರಿತು ಆದೇಶ ಹೊರಡಿಸಿದೆ. ಈ ಕೋರ್ಸ್‌ಗಳಿಗೆ ಅರ್ಜಿ ಸಲ್ಲಿಸಲು ಕೆಲವು ನಿಬಂಧನೆಗಳನ್ನು ಸರ್ಕಾರ ಹೊರಡಿಸಿದೆ. ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಜಮ್ಮು ಮತ್ತು ಕಾಶ್ಮೀರದ ಕಾಯಂ ನಿವಾಸಿಗಳಾಗಿರಬೇಕು. ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಉದ್ಯೋಗಿಗಳ ಮಕ್ಕಳು ಕೂಡ ಇದಕ್ಕೆ ಅರ್ಹರು.

ಜಮ್ಮು ಮತ್ತು ಕಾಶ್ಮೀರದಲ್ಲಿ ಉಗ್ರರ ದಾಳಿಗಳಲ್ಲಿ ತಂದೆ-ತಾಯಿಯನ್ನು ಕಳೆದುಕೊಂಡ ವಿದ್ಯಾರ್ಥಿಗಳು ಹಾಗೂ ಕುಟುಂಬಕ್ಕೆ ಆದಾಯ ತರುತ್ತಿದ್ದ ಸದಸ್ಯರನ್ನು ಕಳೆದುಕೊಂಡ ವಿದ್ಯಾರ್ಥಿಗಳಿಗೂ ಮೀಸಲು ನೀಡಲು ಸರ್ಕಾರ ಮುಂದಾಗಿದೆ.

ಇನ್ನೊಂದೆಡೆ, ಜಮ್ಮು ಮತ್ತು ಕಾಶ್ಮೀರದ 20 ಜಿಲ್ಲೆಗಳಲ್ಲಿರುವ ವೈದ್ಯಕೀಯ ಕಾಲೇಜುಗಳಿಗೆ 265 ಡಿಎನ್‌ಬಿ(ಡಿಪ್ಲೊಮೇಟ್‌ ಆಫ್ ನ್ಯಾಷನಲ್‌ ಬೋರ್ಡ್‌) ಸ್ನಾತಕೋತ್ತರ ಸೀಟುಗಳಿಗೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ. ಇದರಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ಜತೆಗೆ ತಮ್ಮದೇ ಪ್ರದೇಶದಲ್ಲಿ ತರಬೇತಿ ಪಡೆಯಲು ವೈದ್ಯರಿಗೆ ಅನುಕೂಲವಾಗಲಿದೆ.

Advertisement

Udayavani is now on Telegram. Click here to join our channel and stay updated with the latest news.

Next