Advertisement

ಸಾಮಾಜಿಕ ಜಾಲತಾಣದಿಂದ ಯುವಕರ ದಿಕ್ಕು ತಪ್ಪಿಸಲಾಗ್ತಿದೆ; ಆರ್ಮಿ ಜನರಲ್

05:01 PM Jun 10, 2017 | Team Udayavani |

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಯುವಕರನ್ನು ಸಾಮಾಜಿಕ ಜಾಲತಾಣಗಳ ಪ್ರಚಾರದಿಂದಾಗಿ ತಪ್ಪು ದಾರಿಗೆ ಎಳೆಯಲಾಗುತ್ತಿದೆ ಎಂದು ಆರ್ಮಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಶನಿವಾರ ತಿಳಿಸಿರುವುದಾಗಿ ನ್ಯೂಸ್ ಏಜೆನ್ಸಿ ವರದಿ ಮಾಡಿದೆ.

Advertisement

ಸಾಮಾಜಿಕ ಜಾಲತಾಣದಿಂದ ದಿಕ್ಕುತಪ್ಪಿಸುತ್ತಿರುವ ಬಗ್ಗೆ ಇದನ್ನು ಹತ್ತಿಕ್ಕಲು ಭದ್ರತಾ ಪಡೆಗಳು ತಂತ್ರಜ್ಞಾನದ ಮೊರೆ ಹೋಗಬೇಕಾಗಿದೆ ಎಂದು ಇಂಡಿಯನ್ ಮಿಲಿಟರಿ ಅಕಾಡೆಮಿ ಕೆಡೆಟ್ಸ್ ಅನ್ನು ಉದ್ದೇಶಿಸಿ ಮಾತನಾಡುತ್ತಿ ಹೇಳಿರುವುದಾಗಿ ಪಿಟಿಐ ತಿಳಿಸಿದೆ.

ಒಂದು ವೇಳೆ ನಮ್ಮಲ್ಲಿ ಆಧುನಿಕ ತಂತ್ರಜ್ಞಾನ ಇದ್ದಾಗ ನಾವು ಅದನ್ನು ಸೂಕ್ತವಾಗಿ ಬಳಕೆ ಮಾಡಿಕೊಳ್ಳಬೇಕು. ಇದರಿಂದಾಗಿ ಸಾರ್ವಜನಿಕರು ಇಂತಹ ಸುಳ್ಳು ಸುದ್ದಿಯಿಂದ ಎದುರಿಸುವ ಸಮಸ್ಯೆಯಿಂದ ಪಾರಾಗಬಹುದು. ಅಷ್ಟೇ ಅಲ್ಲ ನಾವೂ ಮತ್ತಷ್ಟು ಪ್ರಬಲರಾಗಬಹುದು ಎಂದು ಅಭಿಪ್ರಾಯವ್ಯಕ್ತಪಡಿಸಿರುವುದಾಗಿ ಎಎನ್ ಐ ವಿವರಿಸಿದೆ.

ನಮ್ಮ ದೇಶಕ್ಕೆ ಭಯೋತ್ಪಾದನೆ ದೊಡ್ಡ ಸಮಸ್ಯೆಯಾಗಿದೆ. ಇಂತಹ ಶಕ್ತಿಗಳನ್ನು ಎದುರಿಸಲು ನಮ್ಮ ಪಡೆ ಯಾವಾಗಲೂ ಸಿದ್ಧವಾಗಿರಬೇಕಾಗುತ್ತದೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next