Advertisement

ಉದ್ಯೋಗ ಸೃಷ್ಟಿ ಮಾಡುವಲ್ಲಿ ಕೇಂದ್ರ ಸರ್ಕಾರ ವಿಫಲ: NSUI ಕಾರ್ಯಕರ್ತರ ವಿಭಿನ್ನ ಪ್ರತಿಭಟನೆ

12:49 PM Sep 20, 2019 | Mithun PG |

ಶಿವಮೊಗ್ಗ: ಕೇಂದ್ರ ಸರ್ಕಾರ ಉದ್ಯೋಗ ಸೃಷ್ಟಿ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿ ಎನ್ ಎಸ್ ಯು ಐ ಕಾರ್ಯಕರ್ತರು ಬಸ್ ಸ್ಟ್ಯಾಂಡ್ ವೃತ್ತದಲ್ಲಿ ಶೂ, ಚಪ್ಪಲಿ ಹಾಗೂ ಹಣ್ಣು ಮಾರಾಟ ಮಾಡಿ ವಿಭಿನ್ನ ಪ್ರತಿಭಟನೆ ನಡೆಸಿದರು.

Advertisement

ಶಿವಮೊಗ್ಗ ಆಶೋಕ ವೃತ್ತದಲ್ಲಿ ಎನ್ ಎಸ್ ಯು ಐ ಕಾರ್ಯಕರ್ತರು, ಮೋದಿ ನೇತೃತ್ವದ  ಕೇಂದ್ರ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿ,  ಅಚ್ಚೇ ದಿನ್ ಕಬ್ ಆಯೇಗಾ ಎಂದು ಶೂ ಪಾಲಿಶ್ ಮಾಡುತ್ತಾ ಪ್ರತಿಭಟನೆ ನಡೆಸಿದರು.

ಅಂಬಾನಿ , ಅದಾನಿಗಳಿಗೆ ಮಾತ್ರ ಈ  ದೇಶದಲ್ಲಿ ಒಳ್ಳೆಯ ದಿನಗಳು ಬರುತ್ತಿದೆ. ಆದರೇ ಸಾಮಾನ್ಯ ನಾಗರಿಕರು ಉದ್ಯೋಗ ಇಲ್ಲದೆ ಪರಿತಪಿಸುವಂತಾಗಿದೆ. ಪದವೀಧರರು ಕೆಲಸಕ್ಕಾಗಿ ಅಲೆದಾಡುವುದು ತಪ್ಪಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next