Advertisement

ಪಣಜಿ: ಹಾಸ್ಪಿಟಾಲಿಟಿ ವಲಯದಲ್ಲಿ ಉದ್ಯೋಗಾವಕಾಶಗಳು ಸೃಷ್ಠಿ:ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್

05:00 PM Oct 13, 2022 | Team Udayavani |

ಪಣಜಿ: ಮುಂದಿನ ಐದು ವರ್ಷಗಳಲ್ಲಿ ಗೋವಾದ ಪ್ರವಾಸೋದ್ಯಮದ ಹಾಸ್ಪಿಟಾಲಿಟಿ ವಲಯದಲ್ಲಿ ಎರಡು ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳು ಸೃಷ್ಠಿಯಾಗಲಿದೆ. ಗೋಮಾಂತಕಿಯರು ಈ ಅವಕಾಶವನ್ನು ಬಳಸಿಕೊಳ್ಳಬೇಕು. ಇಲ್ಲದಿದ್ದರೆ ಹೊರಗಿನವರು ಬಂದು ಸದುಪಯೋಗ ಪಡೆದುಕೊಳ್ಳುತ್ತಾರೆ ಎಂದು ಮುಖ್ಯಮಂತ್ರಿ ಡಾ. ಪ್ರಮೋದ್ ಸಾವಂತ್ ಹೇಳಿದ್ದಾರೆ.

Advertisement

ಬೇತಿಮ್‍ನಲ್ಲಿ ಶಾಸಕ ಕೇದಾರ ನಾಯ್ಕ ರವರ ಕಾರ್ಯಾಲಯ ಉಧ್ಘಾಟಿಸಿ ಮಾತನಾಡಿದರು.

ಈ ಅವಕಾಶವನ್ನು ಸದುಪಯೋಗಪಡಿಸಿಕೊಂಡರೆ ಗೋವಾದಲ್ಲಿ ಯಾರೂ ನಿರುದ್ಯೋಗಿಗಳಾಗಿ ಉಳಿಯುವುದಿಲ್ಲ. ಪ್ರವಾಸೋದ್ಯಮ ಸಂಬಂಧಿತ ಪದವಿಗಳ ಜೊತೆಗೆ ಕೌಶಲ್ಯಾಭಿವೃದ್ಧಿಯ ಮೂಲಕ ತನ್ನನ್ನು ತಾನು ನವೀಕರಿಸಿಕೊಳ್ಳಬೇಕು. ಇದಕ್ಕಾಗಿ ಸರ್ಕಾರ ಅಗತ್ಯ ಕ್ರಮಗಳನ್ನು ಕೈಗೊಂಡಿದೆ. ಪ್ರಸ್ತುತ, ಐಟಿಐ ವಿದ್ಯಾರ್ಥಿಗಳಿಗೆ ವಿಶೇಷ ತರಬೇತಿ ನೀಡಲು ಸರ್ಕಾರವು ಕೈಗಾರಿಕೆಗಳ 35 ಸಂಸ್ಥೆಗಳೊಂದಿಗೆ ಒಪ್ಪಂದ ಮಾಡಿಕೊಂಡಿದೆ ಎಂದು ಹೇಳಿದರು.

ಸರ್ಕಾರವು ಹಾಸ್ಪಿಟಾಲಿಟಿ ವಲಯದಲ್ಲಿ ಮೂರರಿಂದ ಆರು ತಿಂಗಳ ತರಬೇತಿಯನ್ನು ನೀಡುವ ಮೂಲಕ ಸಂಬಂಧಪಟ್ಟವರಿಗೆ ಕೆಲಸದ ಅವಕಾಶಗಳನ್ನು ಒದಗಿಸಲು ಪ್ರಯತ್ನಿಸುತ್ತಿದೆ. ಎಲ್ಲರಿಗೂ ಸರ್ಕಾರಿ ಉದ್ಯೋಗ ಸಿಗಲು ಸಾಧ್ಯವಿಲ್ಲ. ಆದರೆ, ಕೌಶಲ್ಯಾಭಿವೃದ್ಧಿ ಶಿಕ್ಷಣದ ಮೂಲಕ ಶೇ 100ರಷ್ಟು ಉದ್ಯೋಗಗಳನ್ನು ಒದಗಿಸುವ ಅಧಿಕಾರ ಸರ್ಕಾರ ಹಾಗೂ ಖಾಸಗಿ ವಲಯಕ್ಕೆ ಇದೆ ಎಂದು ಮುಖ್ಯಮಂತ್ರಿ ಪ್ರತಿಪಾದಿಸಿದರು. ಪ್ರವಾಸೋದ್ಯಮ ವಲಯದಲ್ಲಿ, ಐಟಿ, ಎಲೆಕ್ಟ್ರಾನಿಕ್,  ಮೋಪಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಹೆಚ್ಚಿನ ಸಂಖ್ಯೆಯ ಉದ್ಯೋಗಗಳು ಗೋವಾದಲ್ಲಿ ಲಭ್ಯವಿದೆ ಎಂದರು.

ಗೋಮಾಂತಕಿಯ ಯುವಕರು ಇದರ ಸದುಪಯೋಗ ಪಡೆದುಕೊಳ್ಳಬೇಕು. ಅಸ್ಸಾಂ ಮತ್ತು ಇತರ ರಾಜ್ಯಗಳ ಯುವಕರು ಗೋವಾದಲ್ಲಿ ‘ವೈಟ್ ಕಾಲರ್ ಕೆಲಸ’ ಮಾಡುತ್ತಿದ್ದಾರೆ. ಸ್ಥಳೀಯರು ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಂತೆ ಅಭಿಪ್ರಾಯಪಟ್ಟರು.

Advertisement

ಗೋವಾದಲ್ಲಿ ಹಿಂದೂ, ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರು ಸಾಮರಸ್ಯದಿಂದ ಬದುಕುತ್ತಿದ್ದಾರೆ. ಮೂಲಭೂತವಾಗಿ ರಾಜ್ಯದಲ್ಲಿ ಜಾತಿ ಅಥವಾ ಧರ್ಮದ ಆಧಾರದ ಮೇಲೆ ಎಂದಿಗೂ ಹೋರಾಟ ನಡೆದಿಲ್ಲ ಮತ್ತು ಯಾರೂ ಮತ್ತೆ ಹಾಗೆ ಮಾಡಲು ಪ್ರಯತ್ನಿಸಬಾರದು. ಆದರೆ, ಕೆಲ ರಾಜಕಾರಣಿಗಳು ತಮ್ಮ ಹಿತಾಸಕ್ತಿಗಾಗಿ ಜಗಳ ಸೃಷ್ಟಿಸಲು ಆಸಕ್ತಿ ತೋರುತ್ತಿದ್ದಾರೆ ಎಂದು ಮುಖ್ಯಮಂತ್ರಿ ಆರೋಪಿಸಿದರು. ಈ ಸಂದರ್ಭದಲ್ಲಿ ಶಾಸಕ ಕೇದಾರ ನಾಯ್ಕ ಹಾಗೂ ಮತ್ತಿತರರು ಉಪಸ್ಥಿತರಿದ್ದು, ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next