Advertisement

ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನ

06:03 PM Nov 28, 2021 | Team Udayavani |

ಶಿರ್ವ: ನಡಿಬೆಟ್ಟು ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಶಿರ್ವ: ತುಳುನಾಡಿನ ಐತಿಹಾಸಿಕ ಹಿನ್ನೆಲೆಯಿರುವ 26ನೇ ವರ್ಷದ ಶಿರ್ವ ನಡಿಬೆಟ್ಟು ಸೂರ್ಯ - ಚಂದ್ರ ಸಂಪ್ರದಾಯ ಬದ್ಧ ಕಂಬಳವು ರವಿವಾರ ನಡಿಬೆಟ್ಟು ಕಂಬಳ ಗದ್ದೆಯಲ್ಲಿ ನಡೆಯಿತು.

Advertisement

ಎಲ್ಲೂರು ಶ್ರೀ ವಿಶ್ವೇಶ್ವರ ದೇವಸ್ಥಾನದ ಮಾಜಿ ಆಡಳಿತ ಮೊಕ್ತೇಸರ ಎಲ್ಲೂರುಗುತ್ತು ಪ್ರಫುಲ್ಲ ಶೆಟ್ಟಿ ದೀಪ ಬೆಳಗಿಸಿ ಜೋಡುಕರೆಗೆ ಕಾಯಿ ಒಡೆಯುವುದರ ಮೂಲಕ ಕಂಬಳವನ್ನು ಉದ್ಘಾಟಿಸಿದರು.

ಶತಮಾನಗಳಿಂದ ನಡೆದು ಬರುತ್ತಿರುವ ಧಾರ್ಮಿಕ ಹಿನ್ನೆಲೆಯನ್ನು ಹೊಂದಿರುವ ಶಿರ್ವ ನಡಿಬೆಟ್ಟು ಕಂಬಳವು ನಡಿಬೆಟ್ಟು ಚಾವಡಿಯ ದೈವ ಜುಮಾದಿಗೆ ಪೂಜೆ ಪುರಸ್ಕಾರ ನಡೆದ ಬಳಿಕ ಬಂಟ ಕೋಲ ನಡೆದು ಮೆರವಣಿಗೆಯಲ್ಲಿ ಕೊಂಬು, ವಾದ್ಯ ಘೋಷಗಳೊಂದಿಗೆ ಕೋಣಗಳನ್ನು ಗದ್ದೆಗಿಳಿಸಲಾಯಿತು. ಶಿರ್ವದ ದೈವ ದೇವರುಗಳ ಉತ್ಸವಗಳಲ್ಲಿ ಒಂದಕ್ಕೊಂದು ಸಂಬಂಧವಿದ್ದು ಸಂಪ್ರದಾಯ ಬದ್ಧವಾಗಿ ಕಂಬಳ ನಡೆಯುತ್ತದೆ.

ಹಗ್ಗ ಕಿರಿಯ ವಿಭಾಗದಲ್ಲಿ 30 ಜತೆ ಕೋಣಗಳು ಮತ್ತು ಸಬ್‌ಜೂನಿಯರ್‌ ವಿಭಾಗದಲ್ಲಿ 15 ಜತೆ ಒಟ್ಟು 45ಜತೆ ಕೋಣಗಳು ಕಂಬಳದಲ್ಲಿ ಭಾಗವಹಿಸಿದ್ದವು. ಮನೆತನದ ಕೋಣಗಳನ್ನು ಗದ್ದೆಗಿಳಿಸಿ ಓಡಿಸುವುದರೊಂದಿಗೆ ಸಾಂಪ್ರದಾಯಿಕ ಜೋಡುಕರೆ ಕಂಬಳ ಸಂಪನ್ನಗೊಂಡಿತು.

Advertisement

ಕಾರ್ಯಕ್ರಮದಲ್ಲಿ ಶಿರ್ವ ಗ್ರಾ.ಪಂ. ಅಧ್ಯಕ್ಷ ಕೆ.ಆರ್‌. ಪಾಟ್ಕರ್‌, ಶಿರ್ವ ಆರೋಗ್ಯ ಮಾತಾ ದೇವಾಲಯದ ಪ್ರಧಾನ ಧರ್ಮಗುರು ರೆ|ಫಾ| ಡೆನ್ನಿಸ್‌ ಡೇಸಾ,ಸಹಾಯಕ ಧರ್ಮಗುರು ಫಾ| ರೋಲ್ವಿನ್‌ ಅರಾನ್ಹಾ, ಅಟ್ಟಿಂಜ ಶಂಭು ಶೆಟ್ಟಿ, ಮನೋಜ್‌ ಹೆಗ್ಡೆ,ಸೊರ್ಕಳ ಸಚ್ಚಿದಾನಂದ ಹೆಗ್ಡೆ, ಎಸ್‌.ಕೆ.ಸಾಲ್ಯಾನ್‌, ಸೂಡ ಪ್ರಶಾಂತ್‌ ಕುಮಾರ್‌ ಶೆಟ್ಟಿ, ಕೋಡು ಸದಾನಂದ ಶೆಟ್ಟಿ, ಸುಂದರ ಶೆಟ್ಟಿ,ಶೇಕರ ಶೆಟ್ಟಿ,ಕಾನಬೆಟ್ಟು ಬಡ್ಡು ಪೂಜಾರಿ,ಗ್ರಾ.ಪಂ. ಸದಸ್ಯ ಪ್ರವೀಣ್‌ ಸಾಲಿಯಾನ್‌, ರಾಜೇಶ್‌ ನಾಯ್ಕ,ಸುರೇಂದ್ರ ಪೂಜಾರಿ ಕೊಪ್ಪಲ, ವೀರೇಂದ್ರ ಪೂಜಾರಿ, ಹಿರಿಯರಾದ ಶಿರ್ವ ನಡಿಬೆಟ್ಟು ದಾಮೋದರ ಚೌಟ, ರತ್ನವರ್ಮ ಹೆಗ್ಡೆ, ಕಿಶೋರ್‌ಚಂದ್ರ ಹೆಗ್ಡೆ, ರಘುರಾಮ ನಾಯ್ಕ,ಚಂದ್ರಶೇಖರ ಹೆಗ್ಡೆ, ಕಂಬಳ ವ್ಯವಸ್ಥಾಪಕ ಶಶಿಧರ ಹೆಗ್ಡೆ ಮೊದಲಾದವರು ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next