Advertisement

ಮರಳಿ ಮನೆಗೆ ಬನ್ನಿ! ಬಿಜೆಪಿ ಶಾಸಕ ಉಮೇಶ್ ಕತ್ತಿಗೆ ಹೊರಟ್ಟಿ ಆಹ್ವಾನ

09:11 AM Aug 22, 2019 | Nagendra Trasi |

ಬೆಂಗಳೂರು:ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಹೀಗಾಗಿ ಉಮೇಶ್ ಕತ್ತಿ ಅವರಿಗೆ ಮರಳಿ ಬನ್ನಿ ಎಂದು ಹೇಳಿದ್ದೇವೆ ಎಂಬುದಾಗಿ ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ.

Advertisement

ಬುಧವಾರ ಶಾಸಕರ ಭವನದಲ್ಲಿ ಬಿಜೆಪಿಯ ಹಿರಿಯ ಮುಖಂಡ, ಶಾಸಕ ಉಮೇಶ್ ಕತ್ತಿ ಅವರ ಜತೆ ಹೊರಟ್ಟಿ ಮಾತುಕತೆ ನಡೆಸಿದ ಬಳಿಕ ಮಾತನಾಡಿದರು.

ಮರಳಿ ಮನೆಗೆ ಬನ್ನಿ ಎಂದು ಆಹ್ವಾನ ಕೊಟ್ಟಿದ್ದೇವೆ. ನಾವೆಲ್ಲ ಒಂದೇ ಪಕ್ಷದಲ್ಲಿ ಇದ್ದವರು. ಮುಂದೇನಾಗುತ್ತೋ ಗೊತ್ತಿಲ್ಲ. ಕೆಲವು ಮುಳ್ಳುಗಳಿವೆ, ಅವೆಲ್ಲವನ್ನು ಸರಿಪಡಿಸಿಕೊಂಡು ಬರುತ್ತೇನೆ ಅಂದಿದ್ದಾರೆ ಎಂದು ಹೊರಟ್ಟಿ ಹೇಳಿದರು.

ರಾಜ್ಯ ರಾಜಕೀಯದ ಆಗುಹೋಗುಗಳ ಬಗ್ಗೆ ಈ ಸಂದರ್ಭದಲ್ಲಿ ಚರ್ಚೆ ನಡೆಸಿದ್ದೇವೆ. ಹಿಂದೆ ಒಟ್ಟಿಗೆ ಇದ್ದವರು, ಮುಂದೆ ಒಟ್ಟಿಗೆ ಇರಲೂಬಹುದು ಎಂದು ಮಾರ್ಮಿಕವಾಗಿ ಹೊರಟ್ಟಿ ಅವರು ಪ್ರತಿಕ್ರಿಯೆ ನೀಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next