Advertisement

ಅರಣ್ಯ ರಕ್ಷಣೆಗೆ ಅಧಿಕಾರಿಗಳೊಂದಿಗೆ ಕೈಜೋಡಿಸಿ: ಮಲ್ಲಾಪುರ

12:20 AM Sep 13, 2019 | Team Udayavani |

ಮಡಿಕೇರಿ: ರಾಷ್ಟ್ರದಲ್ಲಿರುವ ಅರಣ್ಯ ಸಂಪತ್ತನ್ನು ರಕ್ಷಣೆ ಮಾಡುವಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಪಾತ್ರ ಮಹತ್ವದ್ದಾಗಿದ್ದು, ಅರಣ್ಯ ಪ್ರದೇಶ ಮತ್ತು ವನ್ಯಜೀವಿಗಳ ಸಂರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕೆಂದು ಪ್ರಧಾನ ಜಿಲ್ಲಾ ಮತ್ತು ಸೆಷನ್‌ ನ್ಯಾಯಾಧೀಶ ವಿ.ವಿ.ಮಲ್ಲಾಪುರ ಅವರು ಕರೆ ನೀಡಿದ್ದಾರೆ.

Advertisement

ನಾಡಿನ ಅರಣ್ಯ ಮತ್ತು ವನ್ಯ ಜೀವಿ ಸಂಪತ್ತು ಸಂರಕ್ಷಿಸುವ ಸಂದರ್ಭ ಪ್ರಾಣ ತ್ಯಾಗ ಮಾಡಿದ ಹುತಾತ್ಮರಿಗೆ ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಪ್ರಯುಕ್ತ ಗೌರವ ನಮನ ಸಲ್ಲಿಸಲಾಯಿತು.

ನಗರದ ಅರಣ್ಯ ಭವನದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಹುತಾತ್ಮರಿಗೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ನ್ಯಾಯಾಧೀಶರು ರಾಷ್ಟ್ರದ ಗಡಿಯನ್ನು ಸೈನಿಕರು ಕಾಯುತ್ತಾರೆ. ಹಾಗೆಯೇ ರಾಷ್ಟ್ರದ ಅರಣ್ಯ ಸಂಪತ್ತನ್ನು ಸಂರಕ್ಷಿಸುವ ಕಾರ್ಯವನ್ನು ಅರಣ್ಯ ಅಧಿಕಾರಿಗಳು ಮಾಡುತ್ತಾರೆ. ಯೋಧರು ಹಾಗೂ ಅರಣ್ಯ ಅಧಿಕಾರಿಗಳ ಸೇವೆ ಮಹತ್ವವ‌ನ್ನು ಪಡೆದುಕೊಂಡಿದೆ ಎಂದರು. ದೇಶಕ್ಕಾಗಿ ಹುತಾತ್ಮರಾದವರನ್ನು ಸ್ಮರಿಸುವುದು ಅತ್ಯಗತ್ಯವಾಗಿದೆ. ಅರಣ್ಯ ಮತ್ತು ಅರಣ್ಯ ಜೀವಿಗಳನ್ನು ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದ್ದು, ಆ ನಿಟ್ಟಿನಲ್ಲಿ ಎಲ್ಲರೂ ಅರಣ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕಿದೆ ಎಂದು ಸೆಷನ್‌ ನ್ಯಾಯಾಧೀಶರು ಹೇಳಿದರು.

ಉಪ ಅರಣ್ಯ ಸಂರಕ್ಷಣಾಧಿಕಾರಿ ಮರಿಯ ಕ್ರಿಸ್ತುರಾಜ ಅವರು ಮಾತನಾಡಿ ರಾಷ್ಟ್ರೀಯ ಸಂಪತ್ತಾದ ಅರಣ್ಯವನ್ನು ಅಧಿಕಾರಿಗಳು ಸಂರಕ್ಷಿಸುತ್ತಾ ಬರುತ್ತಿರುವುದರಿಂದ ಪರಿಸರದ ಸಮಾತೋಲನ ಕಾಯ್ದುಕೊಳ್ಳಲು ಸಾಧ್ಯವಾಗಿದೆ ಎಂದರು. ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿಂಧೆ ನೀಲೇಶ್‌ ಡಿಯೋಬ, ಸಂಚಾರಿ ದಳದ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಿ.ಜಿ.ಕಾರ್ಯಪ್ಪ, ಸಾಮಾಜಿಕ ಅರಣ್ಯ ವಿಭಾಗದ ಎಂ.ಜೆ.ಗೋವರ್ಧನ್‌ ಸಿಂಗ್‌, ವಲಯ ಅರಣ್ಯಾಧಿಕಾರಿ ಸೀಮಾ, ಸÃ ೋಜ, ಕೆ.ಪಿ.ಗೋಪಾಲ, ದೇವಯ್ಯ, ಗಣೇಶ್‌ ಕುಮಾರ್‌, ತಳವಾರ ಚಂದ್ರಯ್ಯ, ಬಸವರಾಜು ಮತ್ತಿತರರು ಹುತಾತ್ಮರಿಗೆ ಹೂ ಗುಚ್ಛ ಅರ್ಪಿಸಿ ಗೌರವ ನಮನ ಸಲ್ಲಿಸಿದರು.

ಕಳೆದ 53 ವರ್ಷಗಳಲ್ಲಿ ಅರಣ್ಯ ಸಂರಕ್ಷಣಾ ಕರ್ತವ್ಯ ನಿರತರಾಗಿದ್ದ ಸಂದರ್ಭದಲ್ಲಿ ಹುತಾತ್ಮರಾದವರ ಹೆಸರನ್ನು ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶ್ರೀಪತಿ ಅವರು ಓದಿದರು.

Advertisement

ವಲಯ ಅರಣ್ಯಾಧಿಕಾರಿ ಶ್ರಮಾ ಅವರು ನಿರೂಪಿಸಿದರು, ಡಿಆರ್‌ಎಫ್ಒ ಮನು ಅವರು ರಾಷ್ಟ್ರೀಯ ಅರಣ್ಯ ಹುತಾತ್ಮರ ದಿನಾಚರಣೆ ಕಾರ್ಯಕ್ರಮ ನಡೆಸಿಕೊಟ್ಟರು.

ಪೊಲೀಸ್‌ ವಾದ್ಯ ವೃಂದದವರಿಂದ ಗೌರವ ಸಲ್ಲಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next