Advertisement

Swatchhata Abhiyan: ಸ್ವಚ್ಛತಾ ಅಭಿಯಾನದಲ್ಲಿ ಪಾಲ್ಗೊಳ್ಳಿ: ಮೋದಿ ಕರೆ

12:49 AM Sep 25, 2023 | Team Udayavani |

ಹೊಸದಿಲ್ಲಿ: ಗಾಂಧಿ ಜಯಂತಿಯ ಮುನ್ನಾದಿನವಾದ ಅ.1ರಂದು ದೇಶಾದ್ಯಂತ ಬೆಳಗ್ಗೆ 10ಕ್ಕೆ ಸ್ವತ್ಛತಾ ಅಭಿಯಾನ ನಡೆಯಲಿದ್ದು, ದೇಶವಾಸಿಗಳೆಲ್ಲರೂ ತಮ್ಮ ಸುತ್ತಲಿನ ಪರಿಸರ, ಸಾರ್ವಜನಿಕ ಸ್ಥಳಗಳನ್ನು ಸ್ವತ್ಛಗೊಳಿಸುವ ಮೂಲಕ ಈ ಅಭಿಯಾನದಲ್ಲಿ ಪಾಲ್ಗೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.
ರವಿವಾರ ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ ಮನ್‌ ಕಿ ಬಾತ್‌ನಲ್ಲಿ ಮಾತನಾಡುತ್ತಾ ಅವರು ಈ ವಿಚಾರ ತಿಳಿಸಿದ್ದಾರೆ.

Advertisement

ಜತೆಗೆ, ಹಬ್ಬಗಳು ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ಖಾದಿ ಉತ್ಪನ್ನಗಳನ್ನು ಖರೀದಿಸುವಂತೆ ಹಾಗೂ ಸ್ಥಳೀಯ ಉತ್ಪನ್ನಗಳಿಗೆ ಹೆಚ್ಚು ಆದ್ಯತೆ ನೀಡುವಂತೆಯೂ ಮನವಿ ಮಾಡಿದ್ದಾರೆ. ಇದೇ ವೇಳೆ, ಜಿ20 ಶೃಂಗದ ವೇಳೆ ಘೋಷಿಸಲಾದ ಭಾರತ-ಮಧ್ಯಪ್ರಾಚ್ಯ-ಯುರೋಪ್‌ ಕಾರಿಡಾರ್‌ ಮುಂಬರುವ ಸಾವಿರಾರು ವರ್ಷಗಳ ಕಾಲ ಜಾಗತಿಕ ವ್ಯಾಪಾರಕ್ಕೆ ಆಧಾರವಾಗಿ ನಿಲ್ಲಲಿದೆ. ಅಷ್ಟೇ ಅಲ್ಲ, ಈ ಯೋಜನೆಯು ಚಿಗುರೊಡೆದಿದ್ದು ಭಾರತದಲ್ಲಿ ಎಂದು ಇತಿಹಾಸವು ನೆನಪಿಸಿಕೊಳ್ಳಲಿದೆ ಎಂದು ಮೋದಿ ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next