Advertisement

ಬಿಜೆಪಿ ಸೇರುತ್ತೇನೆ ಎನ್ನುವುದು ಸುಳ್ಳು ಸುದ್ದಿ: ಗೋವಾ ಶಾಸಕ ವಿಜಯ್ ಸರ್ದೇಸಾಯಿ

07:41 PM Mar 20, 2022 | Team Udayavani |

ಪಣಜಿ: ನಾನು ಬಿಜೆಪಿ ಸೇರುತ್ತೇನೆ ಎಂದು ಕೆಲ ಪಕ್ಷಗಳು ಮತ್ತು ಪ್ರಸಾರ ಮಾಧ್ಯಮಗಳು ಸುಳ್ಳು ಸುದ್ಧಿ ಪಸರಿಸಿವೆ, ನಾನು ಯಾರನ್ನೂ ಭೇಟಿಯಾಗಿಲ್ಲ ಎಂದು ಗೋವಾ ಫಾರ್ವರ್ಡ್ ಪಕ್ಷದ ಅಧ್ಯಕ್ಷ ಹಾಗೂ ಶಾಸಕ ವಿಜಯ್ ಸರ್ದೇಸಾಯಿ ಹೇಳಿದ್ದಾರೆ.

Advertisement

ಮಡಗಾಂವ್ ನಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ನಾನು ಯಾವುದೇ ನಿರ್ಣಯ ತೆಗೆದುಕೊಳ್ಳುವ ಮುನ್ನ ನನ್ನ ಮತದಾರರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇನೆ. ಇದರ ಅರ್ಥ ಮತದಾರರಿಗೆ ಏನು ಬೇಕೊ ಅಂತಹ ನಿರ್ಣಯವನ್ನು ನಾನು ತೆಗೆದುಕೊಳ್ಳುತ್ತೇನೆ. ಕಳೆದ ಬಾರಿ ಬಿಜೆಪಿ ನೇತೃತ್ವದ ಸರ್ಕಾರ ಸ್ಥಾಪನೆಯ ಸಂದರ್ಭದಲ್ಲಿ ಅನಿವಾರ್ಯವಾಗಿ ದಿಢೀರ್ ನಿರ್ಣಯ ತೆಗೆದುಕೊಳ್ಳಬೇಕಾಯಿತು. ಆದರೆ ಪ್ರಸಕ್ತ ಬಾರಿ ಅಂತಹ ಪರಿಸ್ಥಿತಿಯಿಲ್ಲ ಎಂದರು.

ಗೋವಾ ಫಾರ್ವರ್ಡ್ ಪಕ್ಷದ ವಿಜಯ್ ಸರ್ದೇಸಾಯಿ ಬಿಜೆಪಿ ಸರ್ಕಾರಕ್ಕೆ ಬೆಂಬಲ ನೀಡುತ್ತಿದ್ದು, ಅವರಿಗೆ ಮಂತ್ರಿ ಸ್ಥಾನ ನೀಡಲಾಗುತ್ತಿದೆ ಎಂಬ ಸುದ್ಧಿ ರಾಜ್ಯಾದ್ಯಂತ ಚರ್ಚೆಗೆ ಕಾರಣವಾಗಿತ್ತು.

Advertisement

Udayavani is now on Telegram. Click here to join our channel and stay updated with the latest news.

Next