Advertisement

ಸಂಕ್ರಾಂತಿಯಂದು ಕಾಂಗ್ರೆಸ್‌ ಸೇರ್ಪಡೆ: ವೈ.ಎಸ್‌.ವಿ.ದತ್ತ

09:43 PM Jan 05, 2023 | Team Udayavani |

ಕಡೂರು: ಮಕರ ಸಂಕ್ರಾತಿಯಂದು ಬೆಂಗಳೂರಿನಲ್ಲಿರುವ ಪ್ರದೇಶ ಕಾಂಗ್ರೆಸ್‌ ಕಚೇರಿಯಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ ಎಂದು ಮಾಜಿ ಶಾಸಕ ವೈ.ಎಸ್‌.ವಿ.ದತ್ತ ಅಧಿಕೃತವಾಗಿ ಘೋಷಿಸಿದರು.

Advertisement

ತಾಲೂಕಿನ ಯಗಟಿ ಗ್ರಾಮದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎರಡು ದಿನಗಳ ಹಿಂದೆ ಕಾಂಗ್ರೆಸ್‌ ವರಿಷ್ಠರಿಂದ ಕರೆ ಬಂದಿದ್ದು, ಜ.15ರಂದು ಪಕ್ಷಕ್ಕೆ ಸೇರ್ಪಡೆಯಾಗಲು ಸೂಚಿಸಿದ್ದಾರೆ. ಅಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಹಾಗೂ ಸಿಪಿಎಲ್‌ ನಾಯಕ ಸಿದ್ದರಾಮಯ್ಯ ಸಮ್ಮುಖದಲ್ಲಿ ಪಕ್ಷಕ್ಕೆ ಸೇರ್ಪಡೆಯಾಗಲಿದ್ದೇನೆ.

ಫೆಬ್ರವರಿಯಲ್ಲಿ ನನ್ನ ಅಭಿಮಾನಿಗಳು, ಕಾರ್ಯಕರ್ತರು ಕಡೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ. ಐವತ್ತು ವರ್ಷಗಳಿಂದ ಒಂದೇ ಪಕ್ಷದಲ್ಲಿದ್ದೆ. ಈಗ ಅನಿವಾರ್ಯವಾಗಿ ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದೇನೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next