Advertisement

Karnataka Polls ನಾಳೆ ಜೆಡಿಎಸ್ ಗೆ ದೊಡ್ಡ ಮಟ್ಟದಲ್ಲಿ ಮುಖಂಡರ ಸೇರ್ಪಡೆ: ಕುಮಾರಸ್ವಾಮಿ

11:40 AM Apr 13, 2023 | Team Udayavani |

ಕಲಬುರಗಿ: ನೂಕುನುಗ್ಗಲು ಎನ್ನುವಂತೆ ಏ. 14 ರಂದು ಬೆಂಗಳೂರಿನಲ್ಲಿ ಜೆಡಿಎಸ್ ಪಕ್ಷಕ್ಕೆ ಮಾಜಿ ಶಾಸಕರ ಹಾಗೂ ಮುಖಂಡರ ದಂಡೇ ದೊಡ್ಡ ಮಟ್ಟದಲ್ಲಿ ಸೇರ್ಪಡೆಯಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ತಿಳಿಸಿದರು.

Advertisement

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಉತ್ತರ ಕರ್ನಾಟಕದ ಭಾಗದಿಂದಲೇ ಹೆಚ್ಚಿನ ಸಂಖ್ಯೆಯಲ್ಲಿ ಬಿಜೆಪಿ- ಕಾಂಗ್ರೆಸ್ ತೊರೆದು ಜೆಡಿಎಸ್ ಸೇರುತ್ತಿದ್ದಾರೆ. ಸೇರ್ಪಡೆ ಭರಾಟೆ ನೋಡಿದರೆ ಉತ್ತರ ಕರ್ನಾಟಕದಿಂದಲೇ 40ಕ್ಕೂ ಅಧಿಕ ಸ್ಥಾನಗಳು ಪಕ್ಷಕ್ಕೆ ಬರಲಿವೆ. ಹೀಗಾಗಿ ಸರಳವಾಗಿ 123 ಸ್ಥಾನಗಳು ಬರುವುದರಲ್ಲಿ ಯಾವುದೇ ಅನುಮಾನವಿಲ್ಲ ಏನಿಸುತ್ತಿದೆ ಎಂದು ಹೇಳಿದರು.

ನಿರೀಕ್ಷೆ ಮೀರಿ ಮಾಜಿ ಶಾಸಕರು, ಮುಖಂಡರು ಸೇರುತ್ತಿದ್ದು, ಜೇವರ್ಗಿ ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಖ ಸೇರಿದಂತೆ ಹಲವರು ಸೇರುತ್ತಿದ್ದಾರೆ. ಬೆಂಗಳೂರಿನ ಜೆಡಿಎಸ್ ಕಚೇರಿಯಲ್ಲಿ ಸೇರ್ಪಡೆ ಸಮಾವೇಶ ನಡೆಯಲಿದೆ. ಜೆಡಿಎಸ್ ಮುಳುಗಿತು ಎನ್ನುವವರಿಗೆ ಮುಖ ಹೊಡೆದಂತೆ ನೂಕು ನುಗ್ಗಲು ಎನ್ನುವಂತೆ ಸೇರ್ಪಡೆಯಾಗುತ್ತಿದ್ದಾರೆ ಎಂದು ವಿವರಣೆ ನೀಡಿದರು.

ಪಟ್ಟಿಯೂ ನಾಳೆ ರೆಡಿ: ಜೆಡಿಎಸ್ ಪಕ್ಷದ ಅಂತೀಮ ಪಟ್ಟಿಯನ್ನು ಸಹ ಏ. 14 ರ ಸಂಜೆಯೇ ಬಿಡುಗಡೆಗೊಳಿಸಲಾಗುವುದು. ಪಕ್ಷಕ್ಕೆ ಸೇರ್ಪಡೆಯಾದವರ ಹೆಸರುಗಳನ್ನು ಸೇರಿಸಿ ಅಂತಿಮ ಪಟ್ಟಿ ಪ್ರಕಟಿಸಲಾಗುವುದು ಎಂದು ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಇದನ್ನೂ ಓದಿ:Viral: ಬಾಯಿ ಕ್ಯಾನ್ಸರ್‌ ನಿಂದ 90% ರಷ್ಟು ನಾಲಗೆ ಕತ್ತರಿಸಿ ತೆಗೆದರೂ ಮಾತನಾಡಿದ ಮಹಿಳೆ.!

Advertisement

ಮಾಜಿ ಶಾಸಕ ವೈ.ಎಸ್.ವಿ. ದತ್ತಾ ಸೇರ್ಪಡೆ ವಿಷಯ ಎಚ್.ಡಿ.ದೇವೇಗೌಡರಿಗೆ ಬಿಟ್ಟದ್ದು, ಶಾಸಕರಾಗಿದ್ದಾಗಲೂ ತಮ್ಮ ಜತೆ ಸಂಪರ್ಕದಲ್ಲಿರಲಿಲ್ಲ. ಜನತಾ ಪರಿವಾರ ಬಿಟ್ಟು ಹೋದವರೆಲ್ಲ‌ ಮರಳಿ ಜೆಡಿಎಸ್ ಗೆ ಬರುತ್ತಿದ್ದಾರೆ ಎಂದರು.

2018ರಲ್ಲೇ ಮಾಡಬಹುದಿತ್ತಲ್ಲ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮುಖ್ಯಮಂತ್ರಿಯಾದರೆ ಕೆಳಗಡೆ ಕೆಲಸ ಮಾಡಲು ಸಿದ್ದ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಹೇಳಿದ್ದಾರೆ. ಆದರೆ 2018ರಲ್ಲೇ ಖರ್ಗೆ ಅವರನ್ನು ಮುಖ್ಯಮಂತ್ರಿ ಮಾಡಿ ಎಂದು ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಹೇಳಿದ್ದರು. ‌ಅದನ್ನು ಆಗಲೇ ಜಾರಿ ತರಬೇಕಿತ್ತು.‌ ಈಗ ತೋರಿಕೆಗೆ ಹೇಳಲಾಗುತ್ತಿದೆ ಎಂದು ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next