Advertisement

ಅಧಿಕಾರ ದುರಪಯೋಗ, ಕರ್ತವ್ಯಲೋಪ : ಆರೋಗ್ಯ ಇಲಾಖೆಯ ಜಂಟಿ ನಿರ್ದೇಶಕ ಅಮಾನತು

10:27 PM May 19, 2021 | Team Udayavani |

ಚಿಕ್ಕಬಳ್ಳಾಪುರ : ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪದ ಹಿನ್ನೆಲೆಯಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಡಾ.ಮುರಳಿಕೃಷ್ಣ ಅವರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಿ ಸರ್ಕಾರ ಆದೇಶ ಹೊರಡಿಸಿದೆ.

Advertisement

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮೇ12 ಮತ್ತು 13 ರಂದು ಶಿಡ್ಲಘಟ್ಟ ಮತ್ತು ಬಾಗೇಪಲ್ಲಿ ತಾಲೂಕಿನಲ್ಲಿ ಪ್ರವಾಸ ಕೈಗೊಂಡಿದ್ದ ವೇಳೆಯಲ್ಲಿ ಸಹಾಯಕ ವೈದ್ಯಾಧಿಕಾರಿಗಳ ಒತ್ತಡ ಹೇರಿ ತಲಾ ಒಂದು ತಾಲೂಕಿನಿಂದ ರೆಮಿಡಿಸಿವರ್ ಔಷಧಿಯನ್ನು ಅನಧಿಕೃತವಾಗಿ ಪಡೆದಿದ್ದಾರೆ ಎಂದು ಆರೋಪಿಸಲಾಗಿದೆ ಇದರಲ್ಲದೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳ ಮೇಲೆ ಒತ್ತಡ ಹೇರಿ ಹಣ ಮತ್ತು 05 ವೆಂಟಿಲೇಟರ್‍ಗಳನ್ನು ನೀಡಬೇಕೆಂದು ಒತ್ತಾಯಿಸಿದ್ದಾರೆ ಎನ್ನಲಾಗಿದೆ ಚಿಕ್ಕಬಳ್ಳಾಪುರ ಜಿಲ್ಲೆಯ ಖಾಸಗಿ ಆಸ್ಪತ್ರೆಗೆ ಭೇಟಿ ನೀಡಿ ಅವರಿಂದ ಹಣ ವಸೂಲಿ ಮಾಡಿರುವ ಗಂಭೀರ ಆರೋಪದ ಹಿನ್ನೆಲೆಯಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರ ಸೂಚನೆಯನ್ನು ಆಧರಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಬೆಂಗಳೂರು ವಿಭಾಗೀಯ ಜಂಟಿ ನಿರ್ದೇಶಕ ಡಾ.ಮುರಳಿಕೃಷ್ಣ ಅವರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಅವರನ್ನು ತಕ್ಷಣ ಸೇವೆಯಿಂದ ಅಮಾನತ್ತುಗೊಳಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿ ಎಂ.ಕುಮಾರಸ್ವಾಮಿ ಆದೇಶ ಹೊರಡಿಸಿದ್ದಾರೆ.

ಇದನ್ನೂ ಓದಿ :ಜಿಂಕೆ ಬೇಟೆಯಾಡಿದ್ದ ಇಬ್ಬರ ಬಂಧನ, ನಾಲ್ವರು ಪರಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕು ನಿಯಂತ್ರಿಸಲು ಶ್ರಮಿಸುತ್ತಿರುವ ಅಧಿಕಾರಿಗಳ ಮೇಲೆ ಒತ್ತಡಹೇರಿ ಔಷಧಿಗಳು ಹಾಗೂ ಉಪಕರಣಗಳನ್ನು ಅನಧಿಕೃತವಾಗಿ ಪಡೆದುಕೊಳ್ಳಲು ಇಚ್ಛಿಸಿರುವುದು ಅಧಿಕಾರ ದುರುಪಯೋಗ ಮತ್ತು ಕರ್ತವ್ಯಲೋಪವೆಸಗಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರ ವಿರುಧ್ಧ ಶಿಸ್ತುಕ್ರಮ ಬಾಕಿಯಿರಿಸಿ ಸೇವೆಯಿಂದ ಅಮಾನತ್ತುಗೊಳಿಸಬೇಕೆಂದು ಆರೋಗ್ಯ ಸಚಿವರ ಸೂಚನೆಯ ಮೇರೆಗೆ ಜಂಟಿ ನಿರ್ದೇಶಕರನ್ನು ಅಮಾನತ್ತುಗೊಳಿಸಿ ಆದೇಶ ಹೊರಡಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next