Advertisement

ಕೃಷ್ಣ ಭೈರೇಗೌಡ, ಉಗ್ರಪ್ಪ, ಬ್ರಿಜೇಶ್ ಕಾಳಪ್ಪರಿಂದ ಜಂಟಿ ಸುದ್ದಿಗೋಷ್ಠಿ

06:35 PM Mar 21, 2021 | Team Udayavani |

ಬೆಂಗಳೂರು : ಮಾಜಿ ಸಚಿವ ಕೃಷ್ಣ ಭೈರೇಗೌಡ, ಮಾಜಿ ಸಂಸದ ಉಗ್ರಪ್ಪ ಮತ್ತು ಬ್ರಿಜೇಶ್ ಕಾಳಪ್ಪ ಅವರಿಂದ ಜಂಟಿ ಸುದ್ದಿಗೋಷ್ಠಿ ನಡೆಸಲಾಗಿದೆ.

Advertisement

ಸಭೆಯಲ್ಲಿ ಮಾತನಾಡಿರುವ ಮಾಜಿ ಸಂಸದ ಉಗ್ರಪ್ಪ, ಕೆಪಿಸಿಸಿ ಆದೇಶದಂತೆ ಇಂದು ಸುದ್ದಿಗೋಷ್ಠಿ ನಡೆಸ್ತಾಯಿದ್ದೇವೆ, ಬಿಜೆಪಿಯವರು ಭ್ರಷ್ಟಾಚಾರ ಹೆಚ್ಚಾಗಿದೆ, ಲೋಕಪಾಲ ಕಾಯ್ದೆ ಜಾರಿಗೆ ಬರಬೇಕು ಅಂತ ಹೋರಾಟ ಮಾಡಿದ್ದವರು ಇದೇ ಬಿಜೆಪಿವರು. ಆದ್ರೆ ಇಂದು ಆ ಬಗ್ಗೆ ಬಿಜೆಪಿಯ ಯಾವ ನಾಯಕರು ಮಾತಡ್ತಾಯಿಲ್ಲ. ಕಪ್ಪು ಹಣ ದೇಶಕ್ಕೆ ವಾಪಸ್ ಬರುತ್ತೆ ಅಂತ ಹೇಳಿದ್ರೂ ಆ ಕೆಲಸ ಕೂಡ ಇವರಗೆ ಆಗಿಲ್ಲ ಎಂದು ಬಿಜೆಪಿಗೆ ಚಾಟಿ ಬೀಸಿದರು.

ಬಿಜೆಪಿಯವರಿಗೆ  ಭ್ರಷ್ಟಾಚಾರದ ಬಗ್ಗೆ ಮಾತನಾಡುವುದಕ್ಕೆ ನೈತಿಕತೆ ಇದ್ಯಾ. ಸಿಎಂ ಯಡಿಯೂರಪ್ಪ ವಿರುದ್ದ ದೇವನಹಳ್ಳಿ ತಾಲ್ಲೂಕು ಕೆಐಡಿಬಿ ಲ್ಯಾಂಡ್ ವಿಚಾರಕ್ಕೆ ಹೈ ಕೋರ್ಟ್‍ ಆದೇಶ ಒಂದನ್ನ ಕೊಟ್ಟಿದೆ.

ರಾಜಕೀಯ ಭ್ರಷ್ಟಾಚಾರ ತೊಲಗಬೇಕೆಂದರೆ ಲೋಕಪಾಲ್ ವ್ಯವಸ್ಥೆ ಬರಬೇಕು ಎಂದು ಮೋದಿ ಹೇಳಿದ್ದರು. ಮೋದಿಯವರು ರಾಜ್ಯಕ್ಕೆ ಬಂದ ಸಂದರ್ಭದಲ್ಲಿ ಸಿದ್ದರಾಮಯ್ಯನವರ ಮೇಲೆ 10% ಸರ್ಕಾರ ಎಂದು ಆರೋಪ ಮಾಡಿದ್ದರು. ಡಿ ಮಾನಟೈಸೆಷನ್ ಮೂಲಕ ರಾಜಕೀಯ ಭ್ರಷ್ಟಾಚಾರ ತಡೆಯುತ್ತೇವೆ ಎಂದಿದ್ದರು.

ನಾನು ಈಗ ಮಿಸ್ಟರ್ ಮೋದಿಯವರನ್ನ ಕೇಳ್ತಿದ್ದೀನಿ, ಮೊನ್ನೆ ಹೈಕೋರ್ಟ್ ಒಂದು‌ ಜಡ್ಜ್ ಮೆಂಟ್ ನೀಡಿದೆ ಬಹುದೊಡ್ಡ ಭ್ರಷ್ಟಾಚಾರ  ಆದ ಹಿನ್ನೆಲೆಯಲ್ಲಿ ಕೆ ಐ ಡಿ ಬಿ ಅಕ್ವೈರ್ ಮಾಡಿದ ಜಮೀನನ್ನು ಸಿಎಂ ಯಡಿಯೂರಪ್ಪ, ನಿರಾಣಿ, ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಕಿಕ್ ಬ್ಯಾಕ್ ಡಿನೊಟಿಫಿಕೇಶನ್ ಮಾಡಿದ್ದರು ಮುಖ್ಯಮಂತ್ರಿ ಯಡಿಯೂರಪ್ಪ ಅಕ್ಯುಸಡ್ ನಂಬರ್ 1 ಇವರು ಯಡಿಯೂರಪ್ಪ ಯಾವ ರೀತಿ ಅಧಿಕಾರದಲ್ಲಿ ಮುಂದುವರೆಯುತ್ತಾರೆ ಎಂದರು.

Advertisement

ಇದೇ ವೇಳೆ ಮಾಜಿ ಸಚಿವ ಕೃಷ್ಣ ಭೈರೇಗೌಡ ಹೇಳಿಕೆ ನೀಡಿದ್ದು, ಹಿಂದೆ ಯಡಿಯೂರಪ್ಪ ಸಿಎಂ ಆಗಿದ್ದಾಗ ಅಧಿಕಾರ ದುರುಪಯೋಗ ಪಡಿಸಿಕೊಂಡಿದ್ರು. ತಮ್ಮ ವೈಯಕ್ತಿಕ ಲಾಭಕ್ಕಾಗಿ ಡಿನೋಟಿಫಿಕೇಷನ್ ಮಾಡಿದ್ದಾರೆ. ಸ್ಪೆಷಲ್ ಕೋರ್ಟ್ ತಪ್ಪು ಮಾಡಿದೆ ಅಂತ ಹೈ ಕೋರ್ಟ್ ನ್ಯಾಯಮೂರ್ತಿ ಹೇಳಿದ್ದಾರೆ ಯಡಿಯೂರಪ್ಪ ವಿರುದ್ಧ ಈ ಹಿಂದೆಯೇ ಚಾರ್ಜ್ ಶೀಟ್ ಸಲ್ಲಿಕೆಯಾಗಿರುವುದರಿಂದ ತನಿಖೆಗೆ ಒಳಪಡಬೇಕು.

ಜವಾಬ್ದಾರಿಯುತ ಸ್ಥಾನದಲ್ಲಿ ಇರುವವರು ಅಧಿಕಾರ ದುರುಪಯೋಗ ಪಡಿಸಿ ಕೊಳ್ಳ ಬಾರದು. ಹೀಗಾಗಿ ವಿಚಾರಣೆ ನಡೆಯುವಾಗ ಯಡಿಯೂರಪ್ಪ  ಅಧಿಕಾರ ದುರುಪಯೋಗ ಪಡಿಸಿಕೊಳ್ಳುವ ಸಾಧ್ಯತೆ ಇದೆ. ಹೀಗಾಗಿ ಯಡಿಯೂರಪ್ಪ ತಮ್ಮ ಸ್ಥಾನದಲ್ಲಿ ಇರದೇ ರಾಜೀನಾಮೆ ಕೊಡಬೇಕು ಎಂದರು.

ಯಾವ ಮುಖ ಇಟ್ಟುಕೊಂಡು ಬಿಜೆಪಿಯವರು ಯಡಿಯೂರಪ್ಪ ಅವ್ರನ್ನು ಸಿಎಂ ಆಗಿ ಮುಂದುವರೆಸುತ್ತಾರೆ? ಚಾರ್ಜ್ ಶೀಟ್ ಹಾಕಿದ ಹಿನ್ನೆಲೆ ಯಡಿಯೂರಪ್ಪ ಟ್ರಯಲ್ ಫೇಸ್ ಮಾಡಲಿ ಕಾಂಗ್ರೆಸ್ ಯಡಿಯೂರಪ್ಪ ಅವ್ರ ರಾಜೀನಾಮೆಗೆ ಆಗ್ರಹಿಸುತ್ತದೆ ಎಂದು ಉಗ್ರಪ್ಪ ಆಕ್ರೋಶ ವ್ಯಕ್ತಪಡಿಸಿದ್ರು.

Advertisement

Udayavani is now on Telegram. Click here to join our channel and stay updated with the latest news.

Next