Advertisement

ಸೋಮವಾರದಿಂದ ವಿಧಾನಸಭೆಯ ಜಂಟಿ‌ ಅಧಿವೇಶನ: ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ?

01:05 PM Feb 12, 2022 | Team Udayavani |

ಬೆಂಗಳೂರು : ಸೋಮವಾರದಿಂದ ವಿಧಾನಸಭೆಯ  ಜಂಟಿ‌ ಅಧಿವೇಶನ ಆರಂಭವಾಗಲಿದ್ದು, ಸಾರ್ವಜನಿಕರಿಗೆ ಕಲಾಪ ವೀಕ್ಷಣೆ ಮಾಡುವುದಕ್ಕೆ ಮತ್ತೆ ಅವಕಾಶ ಕಲ್ಪಿಸಲಾಗಿದೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಈ ವಿಚಾರ ತಿಳಿಸಿದ್ದಾರೆ.

Advertisement

ಫೆ. 14 ರಂದು ರಾಜ್ಯಪಾಲರು ಸದನ ಉದ್ದೇಶಿಸಿ ಮಾತನಾಡಲಿದ್ದಾರೆ.ರಾಜ್ಯಪಾಲರು ಈ ಬಾರೀ ಗ್ರಾಂಡ್ ಸ್ಟೇಪ್ ನಿಂದ ಬರಲಿದ್ದಾರೆ. ಹಿಂದೆ ಸಹ ಈ ಪದ್ದತಿ ಇತ್ತು ಆದ್ರೆ ಕೆಲ ಕಾರಣಾಂತರದಿಂದ ನಿಲ್ಲಿಸಲಾಗಿತ್ತು.ಈಗ ಅಲ್ಲಿಂದಲೇ ರಾಜ್ಯಪಾಲರು ಬರುತ್ತಾರೆ ಎಂದು ಹೇಳಿದರು.

ರಾಜ್ಯಪಾಲರ ಭಾಷಣ ಆದ ಮೇಲೆ ಸಲ್ಪ ಹೊತ್ತು ಸದನ ಮುಂದೂಡಲಾಗುವುದು.ಇದಾದನಂತರ ಇತ್ತಿಚ್ಚೆಗೆ ಮೃತಪಟ್ಟ ಗಣ್ಯ ವ್ಯಕ್ತಿಗಳಿ‌ ಸಂತಾಪ ಸೂಚನೆ ಇರಲಿದೆ.ಈ ಬಾರೀ ಎರಡು ವಿಧೇಯಕ ಮಂಡನೆಯಾಗಲಿದೆ ಎಂದರು.

ಸೋಮವಾರ 11 ಗಂಟೆಗೆ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ.ನಂತರ ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಚರ್ಚೆ ನಡೆಯಲಿದೆ. ಇದುವರೆಗೆ ಎರಡು ವಿಧೇಯಕ ಕಚೇರಿಗೆ ತಲುಪಿದೆ. ಉಳಿದ ವಿಧೇಯಕವನ್ನು ಸದನ ಪ್ರಾರಂಭ ಆಗುವ ಮೊದಲೇ ಕೊಡಬೇಕು ಎಂದು ಸೂಚಿಸಲಾಗಿದೆ. ಇದುವರೆಗೆ 2062 ಪ್ರಶ್ನೆಗಳು ಬಂದಿವೆ. ಈ ಬಾರಿ ಕಲಾಪ ವೀಕ್ಷಿಸಲು ಸಾರ್ವಜನಿಕರಿಗೆ ಅವಕಾಶ ಕಲ್ಪಿಸಲಾಗಿದೆ ಎಂದರು.

ವಿಧಾನಸೌಧದಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಮಾತನಾಡಿ, ಸದನದ ಬಾವಿಯಲ್ಲಿ ಭಿತ್ತಿಪತ್ರ ಪ್ರದರ್ಶಿಸುವಂತಿಲ್ಲ. ನಿಯಮಗಳ ಪಾಲನೆಗೆ ಎಲ್ಲಾ ಸದಸ್ಯರಿಗೂ ಸೂಚನೆ ನೀಡಲಾಗಿದೆ.ಮೇಲ್ಮನೆಯ ಮಟ್ಟವನ್ನು ಹೆಚ್ಚಿಸಲು ಪ್ರಾಮಾಣಿಕ ಪ್ರಯತ್ನ ಮಾಡಲು ತೀರ್ಮಾನ ಮಾಡಿದ್ದೇವೆ.ಮೊನ್ನೆ ನಡೆದ ತರಬೇತಿ ಶಿಬಿರದಲ್ಲಿ ೪೮ ಪರಿಷತ್ ಸದಸ್ಯರು ಪಾಲ್ಗೊಂಡಿದ್ದರು ಎಂದರು.

Advertisement

೬೦ ದಿನ ಸದನ ನಡೆಯಬೇಕೆಂದು ನಾವು ಹೇಳುತ್ತಲೇ ಬರುತ್ತಿದ್ದೇವೆ.ಸರ್ಕಾರ ಎಷ್ಟು ದಿನ ನಡೆಸಬೇಕೆಂದು ಹೇಳುತ್ತದೋ ಅಷ್ಟು ದಿನ ನಾವು ನಡೆಸಬೇಕಾಗುತ್ತದೆ.

ಚುನಾವಣಾ ಸುಧಾರಣೆ ಬಗ್ಗೆ ಚರ್ಚೆ ಹಮ್ಮಿಕೊಳ್ಳುವ ಚಿಂತನೆ ಇದೆ.ಸರ್ಕಾರ ಒಪ್ಪಿಕೊಂಡರೆ ಮಾಡುತ್ತೇವೆ ಎಂದು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next