Advertisement

ನಾಳೆಯಿಂದ ರಾಜ್ಯ ವಿಧಾನಮಂಡಲ ಅಧಿವೇಶನ: ವಸ್ತ್ರ ಸಂಘರ್ಷ ಪ್ರತಿಧ್ವನಿ?

12:16 AM Feb 13, 2022 | Team Udayavani |

ಬೆಂಗಳೂರು: ರಾಜ್ಯ ವಿಧಾನಮಂಡಲದ  10 ದಿನಗಳ ಅಧಿವೇಶನ ಸೋಮವಾರ ಆರಂಭವಾಗಲಿದೆ.

Advertisement

ಮೊದಲ ದಿನ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲಿದ್ದಾರೆ. ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ ಹಸುರಾಗಿ ಇರುವಾಗಲೇ ಅಧಿವೇಶನ ನಡೆಯಲಿದ್ದು, ಈ ವಿಚಾರವೂ ಕಲಾಪದ ವೇಳೆ ಪ್ರಸ್ತಾವವಾಗುವ ಸಾಧ್ಯತೆ ಇದೆ. ಇದರ ಜತೆಗೆ ಕಾನೂನು-ಸುವ್ಯವಸ್ಥೆಯ ಬಗ್ಗೆ ವಿಪಕ್ಷಗಳಾಗಿರುವ ಕಾಂಗ್ರೆಸ್‌, ಜೆಡಿಎಸ್‌ ಪ್ರಸ್ತಾವಿಸುವ ಸಾಧ್ಯತೆಗಳಿದ್ದು, ಸರಕಾರ ಮತ್ತು ವಿಪಕ್ಷಗಳ ನಡುವೆ ಜಟಾಪಟಿ ಉಂಟಾಗುವ ಲಕ್ಷಣಗಳಿವೆ.

ನದಿ ಜೋಡಣೆ, ಮೇಕೆದಾಟು ಯೋಜನೆ, ಬೆಳೆ ವಿಮೆ ಸಮಸ್ಯೆ, ಬೆಂಬಲ ಬೆಲೆಯಡಿ ರಾಗಿ ಖರೀದಿಗೆ ಮಿತಿ ಹೇರಿರುವುದು ಮತ್ತಿತರ ವಿಚಾರಗಳಲ್ಲಿ ಸದನದ ಒಳಗೆ ಮತ್ತು ಹೊರಗೆ ಹೋರಾಟಕ್ಕೆ ಕಾಂಗ್ರೆಸ್‌ ಸಿದ್ಧತೆ ನಡೆಸುತ್ತಿದೆ. ಸೋಮವಾರ ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಅಲ್ಲಿ ರೂಪುರೇಷೆ ನಿಗದಿಯಾಗಲಿದೆ.

ಜೆಡಿಎಸ್‌ ತನ್ನ ಶಾಸಕರ ಕ್ಷೇತ್ರಗಳಲ್ಲಿ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಸರಕಾರದ ಗಮನ ಸೆಳೆಯಲು ಮುಂದಾಗಿದೆ.

ಕ್ಷೇತ್ರಾವಾರು ಸಮಸ್ಯೆಗಳ ಬಗ್ಗೆ ಟಿಪ್ಪಣಿ ಮಾಡಿಕೊಂಡು ಬರುವಂತೆ ಶಾಸಕರಿಗೆ ಸೂಚನೆ ನೀಡಿದೆ.  ಪರಿಷತ್‌ನಲ್ಲಿ ಮತಾಂತರ ನಿಷೇಧ ಮಸೂದೆ ಇನ್ನೂ ಅಂಗೀಕಾರವಾಗಿಲ್ಲ. ಅಲ್ಲಿ ಬಿಜೆಪಿಗೆ ಬಹುಮತ ಇರುವುದರಿಂದ ಮಂಡಿಸುವ ನಿರೀಕ್ಷೆಯಿದೆ.

Advertisement

ಶಾಸಕರಿಗೆ ತಾಕೀತು :

ಸಂಪುಟ ವಿಸ್ತರಣೆ ಮತ್ತು ಪುನಾರಚನೆ ವಿಚಾರವಾಗಿ ಅಧಿವೇಶನ ಸಂದರ್ಭ ಯಾರೂ ಮಾತನಾಡಬಾರದು ಎಂದು ತಾಕೀತು ಮಾಡಲಾಗಿದೆ ಎಂದು ತಿಳಿದು ಬಂದಿದೆ. ಜಂಟಿ ಅಧಿ ವೇಶನದ ಬಳಿಕ ಬಜೆಟ್‌ ಅಧಿ ವೇಶನ ಎದುರಾಗಲಿದ್ದು, ಸಚಿವರು ತಮ್ಮ ಇಲಾಖೆಗಳ ಬಗ್ಗೆ ಹೆಚ್ಚು ಒತ್ತು ನೀಡಿ ಕೆಲಸ ಮಾಡ ಬೇಕು ಎಂದು ಹೇಳಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next