Advertisement

ಹಿರಿಯ ಪತ್ರಕರ್ತ ಪ್ರಸಾದ್‌ ಹೆಗಡೆ ನಿಧನ

05:59 PM Mar 19, 2023 | Team Udayavani |

ಬೆಂಗಳೂರು: ಹಿರಿಯ ಪತ್ರಕರ್ತ ಪ್ರಸಾದ್‌ ಹೆಗಡೆ ಅನಾರೋಗ್ಯಕ್ಕೆ ತುತ್ತಾಗಿ ಶನಿವಾರ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

Advertisement

ಉತ್ತರ ಕನ್ನಡ ಜಿಲ್ಲೆ ಯಲ್ಲಾಪುರ ತಾಲೂಕಿನ ಚವತ್ತಿ ಮೂಲದ ಪ್ರಸಾದ್‌ ಹೆಗಡೆ (43) ಹಲವು ದಿನಗಳಿಂದ ಅನಾರೋಗ್ಯಕ್ಕೆ ತುತ್ತಾಗಿದ್ದರು.

ರಾಜ್ಯದ ಪ್ರಮುಖ ಸುದ್ದಿವಾಹಿನಿಗಳಲ್ಲಿ ಔಟ್‌ಫ‌ುಟ್‌ ಚೀಫ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ಮಾಧ್ಯಮ ಲೋಕದಲ್ಲಿ ಅಪಾರ ಅನುಭವ ಹೊಂದಿದ್ದರು.

ಮಿಮಿಕ್ರಿ, ಸಾಹಿತ್ಯ ಇತ್ಯಾದಿ ಚಟುವಟಿಕೆಗಳಲ್ಲಿ ಸಕ್ರೀಯವಾಗಿದ್ದರು. ಹುಟ್ಟೂರು ಚವತ್ತಿಯಲ್ಲಿ ಶನಿವಾರವೇ ಪ್ರಸಾದ್‌ ಅವರ ಅಂತ್ಯಕ್ರಿಯೆ ನೆರವೇರಿತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next