Advertisement

ಸುಪಾರಿ ಪ್ರಕರಣ; ಬೆಳಗೆರೆ ಮಧ್ಯಂತರ ಜಾಮೀನು ಅವಧಿ 2 ದಿನ ವಿಸ್ತರಣೆ

03:54 PM Dec 16, 2017 | Team Udayavani |

ಬೆಂಗಳೂರು: ಸಹೋದ್ಯೋಗಿ ಪತ್ರಕರ್ತ ಸುನೀಲ್ ಹೆಗ್ಗರವಳ್ಳಿ ಕೊಲೆಗೆ ಸುಪಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಯ್ ಬೆಂಗಳೂರು ಸ್ಥಾಪಕ ಸಂಪಾದಕ ರವಿ ಬೆಳಗೆರೆಯ ಮಧ್ಯಂತರ ಜಾಮೀನು ಅವಧಿಯನ್ನು 2 ದಿನ ಕಾಲ ವಿಸ್ತರಿಸಿ ಸಿಟಿ ಸಿವಿಲ್ ನ್ಯಾಯಾಲಯ ಆದೇಶ ನೀಡಿದೆ.

Advertisement

ಕೊಲೆಗೆ ಸುಪಾರಿ ಪ್ರಕರಣದಲ್ಲಿ ರವಿ ಬೆಳಗೆರೆಗೆ ಕೋರ್ಟ್ ಮೂರು ದಿನಗಳ ಷರತ್ತುಬದ್ಧ ಜಾಮೀನು ನೀಡಿತ್ತು. ಇಂದು ಜಾಮೀನು ಅವಧಿ ಅಂತ್ಯವಾದ ಹಿನ್ನೆಲೆಯಲ್ಲಿ ಮತ್ತೆ ಜಾಮೀನು ಅರ್ಜಿಗೆ ಬೆಳಗೆರೆ ಪರ ವಕೀಲರು ಅರ್ಜಿ ಸಲ್ಲಿಸಿದ್ದರು.

ನ್ಯಾಯಾಧೀಶ ಮಧುಸೂದನ್ ಅವರು ಪತ್ರಕರ್ತ ಬೆಳಗೆರೆ ಜಾಮೀನು ಅವಧಿಯನ್ನು ಡಿಸೆಂಬರ್ 18ರವರೆಗೆ ವಿಸ್ತರಿಸಿ ಆದೇಶ ನೀಡಿದರು. ರವಿ ಬೆಳಗೆರೆಗೆ ತೀವ್ರ ಅನಾರೋಗ್ಯಗೊಂಡ ಹಿನ್ನೆಲೆಯಲ್ಲಿ ಕೋರ್ಟ್ ಜಾಮೀನು ಮಂಜೂರು ಮಾಡಿತ್ತು. ಸದ್ಯ ರವಿ ಬೆಳಗೆರೆ ಜಯದೇವ ಆಸ್ಪತ್ರೆಯ ಐಸಿಯೂನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next