Advertisement

ಕಾನ್ಪುರ: ಗುಂಡಿಕ್ಕಿ ಪತ್ರಕರ್ತನ ಹತ್ಯೆ

08:16 AM Dec 01, 2017 | Team Udayavani |

ಕಾನ್ಪುರ: ರಾಷ್ಟ್ರೀಯ ಹಿಂದಿ ದೈನಿಕವೊಂದರ ಪತ್ರಕರ್ತನನ್ನು ದುಷ್ಕರ್ಮಿಗಳು  ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಕಾನ್ಪುರದ ಬಿಲ್‌ ಹೌರ್‌ನಲ್ಲಿ ಗುರುವಾರ ತಡರಾತ್ರಿ ನಡೆದಿದೆ .

Advertisement

ಮೃತ ಪತ್ರಕರ್ತನನ್ನು ನವೀನ್‌ ಶ್ರೀವಾಸ್ತವ ಎಂದು ಗುರುತಿಸಲಾಗಿದೆ. ಬಿಲ್‌ ಹೌರ್‌ನ ಅಂಗಡಿಯೊಂದರಲ್ಲಿ ಕುಳಿತಿದ್ದ ಸಂದರ್ಭದಲ್ಲಿ ಬೈಕ್‌ನಲ್ಲಿ ಆಗಮಿಸಿದ್ದ ಮೂವರು ದುಷ್ಕರ್ಮಿಗಳು ಪತ್ರಕರ್ತನ ಮೇಲೆ ಗುಂಡಿನ ದಾಳಿ ನಡೆಸಿ ಪರಾರಿಯಾಗಿದ್ದಾರೆ. ಗುಂಡೇಟಿನಿಂದ ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಅಸ್ಪತ್ರೆಗೆ ಸಾಗಿಸುವ ಮಾರ್ಗ ಮದ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದು ಬಂದಿದೆ.
ಅಪರಾಧಿಗಳ ಪತ್ತೆಗೆ ಬಲೆ ಬಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. 

ಸಿಎಂ ಯೋಗಿ ಆದಿತ್ಯನಾಥ್‌ ತನಿಖೆಗೆ ಆದೇಶ: ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಈ ಹತ್ಯೆಯ ದುಷ್ಕರ್ಮಿಗಳನ್ನು ಕೂಡಲೇ ಪತ್ತೆ ಹಚ್ಚುವಂತೆ ಉತ್ತರ ಪ್ರದೇಶ ಡಿಜಿಪಿಯವರಿಗೆ ಆದೇಶಿಸಿದ್ದಾರೆಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next