Advertisement

ಸುಳ್ಯ: ಪ್ರವೀಣ್ ನೆಟ್ಟಾರು ಮನೆಗೆ ಜೆ.ಪಿ. ನಡ್ಡಾ ಭೇಟಿ

06:11 PM Apr 30, 2023 | Team Udayavani |

ಸುಳ್ಯ: ದುಷ್ಕರ್ಮಿಗಳಿಂದ ಹತ್ಯೆಯಾದ ಬಿಜೆಪಿ ಯುವ ನಾಯಕ ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಮನೆಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ರವಿವಾರ (ಎ.30) ಭೇಟಿ ನೀಡಿದರು.

Advertisement

ಮನೆಗೆ ಆಗಮಿಸಿದ ಜೆ.ಪಿ.ನಡ್ಡಾ ಅವರನ್ನು ಮನೆಯವರು ಸ್ವಾಗತಿಸಿದರು. ಬಳಿಕ ಜೆ.ಪಿ. ನಡ್ಡಾ ಅವರು ಪ್ರವೀಣ್ ನೆಟ್ಟಾರು ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ನೆರವೇರಿಸಿದರು.

ಬಿಜೆಪಿ ವತಿಯಿಂದ ನಿರ್ಮಿಸಿ ಕೊಡಲಾದ ನೂತನ ಮನೆಯನ್ನು ವೀಕ್ಷಿಸಿ, ಮನೆಯವರ ಜೊತೆ ಮಾತುಕತೆ ನಡೆಸಿದರು. ಸಂಸದ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಜೆ.ಪಿ.ನಡ್ಡಾ ಅವರಿಗೆ ಮನೆಯವರನ್ನು ಪರಿಚಯಿಸಿ ಮಾಹಿತಿ ನೀಡಿದರು.

ಪ್ರವೀಣ್ ತಂದೆ ಶೇಖರ ಪೂಜಾರಿ, ತಾಯಿ ರತ್ನಾವತಿ, ಪತ್ನಿ ನೂತನ ಸೇರಿದಂತೆ ಮನೆಯವರು, ಬಿಜಪಿ ಪ್ರಮುಖರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಜೆ.ಪಿ.ನಡ್ಡಾ ಅವರು ಹೆಲಿಕಾಪ್ಟರ್ ಮೂಲಕ ಸುಳ್ಯಕ್ಕೆ ಆಗಮಿಸಿ, ರಸ್ತೆ ಮಾರ್ಗದ ಮೂಲಕ ಕಾರಲ್ಲಿ ಬೆಳ್ಳಾರೆಯ ನೆಟ್ಟಾರಿಗೆ ಆಗಮಿಸಿದರು. ಪೊಲೀಸ್ ಇಲಾಖೆ, ಅರೆಸೇನಾ ಪಡೆ ವತಿಯಿಂದ ಬಿಗಿ ಪೊಲೀಸ್ ಬಂದೋ ಬಸ್ತ್ ಮಾಡಲಾಗಿತ್ತು.

Advertisement

Advertisement

Udayavani is now on Telegram. Click here to join our channel and stay updated with the latest news.

Next