Advertisement

ಶೃಂಗೇರಿಯಲ್ಲಿ ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದ ಜೆ.ಪಿ.ನಡ್ಡಾ

10:29 PM Feb 20, 2023 | Team Udayavani |

ಚಿಕ್ಕಮಗಳೂರು : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ರಾತ್ರಿ ಶ್ರೀ ಕ್ಷೇತ್ರ ಶೃಂಗೇರಿಗೆ ಆಗಮಿಸಿ ಶ್ರೀ  ವಿಧುಶೇಖರ ಶ್ರೀಗಳ ಆಶೀರ್ವಾದ ಪಡೆದರು.

Advertisement

ಗುರುಭವನದ ನರಸಿಂಹವನದ ಶ್ರೀ ಮಠಕ್ಕೆ ಭೇಟಿ ನೀಡಿ ಗುರುಗಳ ಆಶೀರ್ವಾದ ಪಡೆದು ಸಮಾಲೋಚನೆ ನಡೆಸಿದರು.ಗುರುಗಳ ಭೇಟಿ ಬಳಿಕ ಶಾರದಾಂಬೆ ದರ್ಶನ ಪಡೆದರು.

ಕೇಂದ್ರ ಸಚಿವೆ, ಸಂಸದೆ ಶೋಭಾ ಕರಂದ್ಲಾಜೆ , ನಳೀನ್ ಕುಮಾರ್ ಕಟೀಲ್, ಸಿ.ಟಿ.ರವಿ ಅವರು ಈ ವೇಳೆ ಉಪಸ್ಥಿತರಿದ್ದರು.

ಮಠ ಭೇಟಿಗೂ ಮುನ್ನ ಕೊಪ್ಪದಲ್ಲಿ ಏರ್ಪಡಿಸಲಾದ ಅಡಿಕೆ ಬೆಳೆಗಾರರ ಸಮಾವೇಶ, ಚುನಾಯಿತ ಪ್ರತಿನಿಧಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದರು.

Advertisement

Udayavani is now on Telegram. Click here to join our channel and stay updated with the latest news.

Next