Advertisement

ಜೆಪಿಯಿಂದ ಜನಸಂಪರ್ಕ ಸಭೆ

12:12 PM Jul 13, 2017 | |

ಸಿಂದಗಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಬಿಜೆಪಿ ಬಿಜೆಪಿ ಸರಕಾರ ರಚನೆಯಾಗುವುದು ಖಂಡಿತ ಎಂದು ಮಾಜಿ ಸಚಿವ ಎಸ್‌.ಕೆ. ಬೆಳ್ಳುಬ್ಬಿ ವಿಶ್ವಾಸ ವ್ಯಕ್ತಪಡಿಸಿದರು.

Advertisement

ಬುಧವಾರ ಪಟ್ಟಣದ ವಿದ್ಯಾನಗರದಲ್ಲಿ ದೀನ್‌ದಯಾಳ ಉಪಾಧ್ಯಾಯ ಅವರ ಜನ್ಮ ಶತಾಬ್ದಿ ನಿಮಿತ್ತ ಹಮ್ಮಿಕೊಂಡ ಜನಸಂಪರ್ಕ ಅಭಿಯಾನದ ವಿಸ್ತಾರಕರ ಸಭೆಯಲ್ಲಿ ಅವರು ಮಾತನಾಡಿದರು. ನರೇಂದ್ರ ಮೋದಿ ಅವರು ಪ್ರಧಾನಿಯಾದಾಗಿನಿಂದ ದೇಶದ
ಅಭಿವೃದ್ಧಿ ಶರವೇದಲ್ಲಿ ನಡೆಯುತ್ತಿದೆ. ನರೇಂದ್ರ ಮೋದಿ ಅವರು ದೇಶದ ಅಭಿವೃದ್ಧಿಗಾಗಿ ಹಮ್ಮಿಕೊಂಡ ಕಾರ್ಯಗಳು ಮತ್ತು ರಾಜ್ಯದಲ್ಲಿ ಬಿಜೆಪಿ ಸರಕಾರ ಮಾಡಿದ ಸಾಧನೆಗಳು ಮತದಾರರು ಅರಿಯಬೇಕು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವ ಮೂಲಕ ರಾಜ್ಯದ ಅಧಿಕಾರ ಬಿಜೆಪಿಗೆ ನೀಡಿ ರಾಜ್ಯದ ಹಿತ ಕಾಪಾಡಿ ಎಂದು ಮತದಾರರ ಮೆನ ಮನೆಗೆ ಹೋಗಿ ವಿನಂತಿಸಿಕೊಂಡರು.

ತಾಲೂಕಿನ ಬಿಜೆಪಿ ಮಂಡಲ ಅಧ್ಯಕ್ಷ ಸಿದ್ದು ಬುಳ್ಳಾ, ಯುವ ಮೋರ್ಚಾ ಅಧ್ಯಕ್ಷ ಬಸವರಾಜ ಸಜ್ಜನ, ನಗರ ಘಟಕ ಅಧ್ಯಕ್ಷ ಮಲ್ಲು ಪಡಶೆಟ್ಟಿ, ಪುರಸಭೆ ಸದಸ್ಯ ಚಂದ್ರಶೇಖರ ಅಮಲಿಹಾಳ, ಶಿವು ರೋಡಗಿ ಬಮ್ಮಣ್ಣಿ, ಮೇಲನಗೌಡ ಪಾಟೀಲ ಯಂಕಂಚಿ ಸೇರಿದಂತೆ ಕಾರ್ಯಕರ್ತರು ವಿಸ್ತಾರಕ ಕಾರ್ಯಕ್ರಮದಲ್ಲಿ ಭಾಗವಹಿಸಿ ಮನೆ ಮನೆಗೆ ಭೇಟಿ ನೀಡಿ ಬಿಜೆಪಿ ಸಾಧನೆ ಮತ್ತು ಕಾಂಗ್ರೆಸ್‌ ಸರಕಾರದ ವೈಫಲ್ಯದ ಬಗ್ಗೆ ಮತದಾರರಿಗೆ ಮನವರಿಕೆ ಮಾಡಿದರು. 

Advertisement

Udayavani is now on Telegram. Click here to join our channel and stay updated with the latest news.

Next