Advertisement
ಹೊಸ ರೈಲು ಮಂಗಳವಾರ ಹೊರತುಪಡಿಸಿ ವಾರದ ಎಲ್ಲ ದಿನವೂ ಸಂಚರಿಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ. ಅದಕ್ಕೆ ಯಶವಂತಪುರ, ದಾವಣಗೆರೆ, ಹುಬ್ಬಳ್ಳಿಯಲ್ಲಿ ನಿಲುಗಡೆ ಇರಲಿದೆ. ಪ್ರಯಾಣದ ಅವಧಿ 6 ಗಂಟೆ 55 ನಿಮಿಷ.ಬೆಂಗಳೂರು-ಧಾರವಾಡ ನಡುವೆ ಸಂಚರಿಸುವ ರೈಲಿನ ಸರಾಸರಿ ವೇಗ ಗಂಟೆಗೆ 70.54 ಕಿ.ಮೀ. ಆಗಿರಲಿದೆ.
ಸದ್ಯ ಚೆನ್ನೈನಿಂದ ಮೈಸೂರಿಗೆ ಸಂಚರಿಸುವ ರೈಲು ರಾಜ್ಯದ ಮೊದಲ ವಂದೇ ಭಾರತ್ ಎಕ್ಸ್ಪ್ರೆಸ್ ಆಗಿದೆ. ಇದಲ್ಲದೆ ಮುಂಬಯಿ-ಗೋವಾ, ಪಟ್ನಾ-ರಾಂಚಿ, ಭೋಪಾಲ್- ಇಂದೋರ್ ಮತ್ತು ಭೋಪಾಲ್- ಜಬಲ್ಪುರ ನಡುವೆ ಸಂಚರಿಸಲಿರುವ ರೈಲುಗಳನ್ನೂ ಮೋದಿಯೇ ಉದ್ಘಾಟಿಸುವ ಸಾಧ್ಯತೆ ಇದೆ.