Advertisement

ನ್ಯಾಯವಾದಿ ಹಂತಕನಿಗೆ ಗಲ್ಲು ಶಿಕ್ಷೆ ವಿಧಿಸಿ

06:29 PM Mar 02, 2021 | Team Udayavani |

ಬೀದರ: ಹೊಸಪೇಟೆ ನ್ಯಾಯಾಲಯ ಆವರಣದಲ್ಲಿ ವಕೀಲ ತಾರಳ್ಳಿ ವೆಂಕಟೇಶ ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಗ್ಗೆ ಪಾರದರ್ಶಕ ತನಿಖೆ ಕೈಗೊಂಡು ಆರೋಪಿಗೆ ಮರಣ ದಂಡನೆ ಶಿಕ್ಷೆ ವಿಧಿಸುವಂತೆ ಆಗ್ರಹಿಸಿ ನಗರದಲ್ಲಿ ವಕೀಲರು ಪ್ರತಿಭಟನೆ ನಡೆಸಿದರು.

Advertisement

ಜಿಲ್ಲಾ ವಕೀಲರ ಸಂಘದ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ಸಿಎಂ, ಗೃಹ ಸಚಿವರು ಮತ್ತು ಕಾನೂನು ಸಚಿವರಿಗೆ ಬರೆದ ಮನವಿ ಪತ್ರ ಜಿಲ್ಲಾಧಿಕಾರಿ ರಾಮಚಂದ್ರನ್‌ ಆರ್‌. ಅವರಿಗೆ ಸಲ್ಲಿಸಿದರು.

ಕೋರ್ಟ್‌ ಆವರಣದಲ್ಲೇ ಕೊಲೆ ಕೃತ್ಯ ಆಘಾತಕಾರಿ ಸಂಗತಿ. ಹಾಡಹಗಲೇ ನ್ಯಾಯಾಲಯದಲ್ಲೇ ವೆಂಕಟೇಶ ಅವರನ್ನು ಕೊಲೆ ಮಾಡಲಾಗಿದ್ದು, ಇದನ್ನು ಗಮನಿಸಿದರೆ ರಾಜ್ಯದ ವಕೀಲರಿಗೆ ಯಾವುದೇ ರಕ್ಷಣೆ ಇಲ್ಲ ಎಂಬುದು ಕಂಡು ಬರುತ್ತದೆ. ಶೀಘ್ರ ವಕೀಲರ ಸಂರಕ್ಷಣೆ ಕಾಯ್ದೆ ಜಾರಿಗೆ ತರಬೇಕೆಂದು ಮನವಿ ಮಾಡಲಾಗಿದೆ. ತಾರಳ್ಳಿ ವೆಂಕಟೇಶ ಅವರ ಬರ್ಬರ ಹತ್ಯೆ ಬಗ್ಗೆ ಕೂಲಂಕಷವಾಗಿ ತನಿಖೆ ಮಾಡಿ ಕೊಲೆ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು. ಕೊಲೆಯಾದ ವಕೀಲರ ಕುಟುಂಬಕ್ಕೆ 50 ಲಕ್ಷ ರೂ. ಪರಿಹಾರ ಧನ ವಿತರಿಸಬೇಕೆಂದು ಆಗ್ರಹಿಸಲಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next