Advertisement

ಅಮೃತ್‌ಪೌಲ್‌ಗೆ ಮತ್ತೆ ನ್ಯಾಯಾಂಗ ಬಂಧನ

10:39 PM Sep 12, 2022 | Team Udayavani |

ಬೆಂಗಳೂರು: ಪಿಎಸ್‌ಐ ಪರೀಕ್ಷೆ ನೇಮಕಾತಿ ಅಕ್ರಮದಲ್ಲಿ ಎರಡನೇ ಬಾರಿಗೆ ಎಂಟು ದಿನಗಳ ಪೊಲೀಸ್‌ ಕಸ್ಟಡಿಯಲ್ಲಿದ್ದ ಎಡಿಜಿಪಿ ಅಮೃತ್‌ಪೌಲ್‌ ಅವರನ್ನು ಸೋಮವಾರ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Advertisement

ರಾಮಮೂರ್ತಿನಗರ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ  ಸಂಬಂಧಿಸಿ 8 ದಿನಗಳ  ಹಿಂದೆ  ಅವರನ್ನು ಸಿಐಡಿ ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದರು.

ನಂಬಿ ಕೆಟ್ಟೆ ಎಂದ ಎಡಿಜಿಪಿ
ವಿಚಾರಣೆ ವೇಳೆ, ನಾನು ತನ್ನ ಕೈಕೆಳಗಿನ ಅಧಿಕಾರಿಗಳನ್ನು ನಂಬಿ ಸ್ಟ್ರಾಂಗ್‌ ರೂಮ್‌ನ ಕೀ ಕೊಟ್ಟಿದ್ದೆ. ಆದರೆ ಡಿವೈಎಸ್ಪಿ ಹಾಗೂ ಇತರ ಅಧಿಕಾರಿಗಳು ಅದನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಇದರಲ್ಲಿ ತನ್ನ ತಪ್ಪು ಇಲ್ಲ. ನಂಬಿ ಕೆಟ್ಟೆ ಎಂದ ಪೌಲ್‌, ಮತ್ತೂಂದೆಡೆ ಇಡೀ ಪ್ರಕರಣದ ತನಿಖೆ ನಡೆಸುವಂತೆ ಸರಕಾರಕ್ಕೆ ಸಲಹೆ ಕೊಟ್ಟಿದ್ದೇ ನಾನು ಎಂದು ಹೇಳುವ ಮೂಲಕ ಅಚ್ಚರಿ ಮೂಡಿಸಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next