Advertisement

Kundapura ಕೊಲೆ ಆರೋಪಿಗಳಿಗೆ ನ್ಯಾಯಾಂಗ ಬಂಧನ

12:54 AM Oct 10, 2023 | Team Udayavani |

ಕುಂದಾಪುರ: ಚಿಕ್ಕನ್‌ಸಾಲ್‌ ರಸ್ತೆಯ ಅಂಚೆ ಕಚೇರಿ ಸಮೀಪ ಅ. 1ರಂದು ಸಂಜೆ ಚೂರಿ ಇರಿದು ಕುಂದಾಪುರದ ನಿವಾಸಿ ರಾಘವೇಂದ್ರ ಶೇರುಗಾರ್‌ ಅಲಿಯಾಸ್‌ ಬನ್ಸ್‌ ರಾಘು (42) ಎನ್ನುವವರನ್ನು ಕೊಲೆಗೈದ ಪ್ರಕರಣದ ಬಂಧಿತರಾದ ಇಬ್ಬರು ಆರೋಪಿಗಳಿಗೆ ನ್ಯಾಯಾಲಯ ಸೋಮವಾರ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ.

Advertisement

ಶಿವಮೊಗ್ಗ ಜಿಲ್ಲೆಯ ಶಫಿವುಲ್ಲ ಅಲಿಯಾಸ್‌ ಆಟೋ ಶಫಿ (40), ಮಹಮ್ಮದ್‌ ಇಮ್ರಾನ್‌ (43)ನನ್ನು ಅ. 5ರಂದು ಶಿವಮೊಗ್ಗ ರೈಲ್ವೇ ನಿಲ್ದಾಣದ ಬಳಿ ಬಂಧಿಸಲಾಗಿತ್ತು. ಅ. 6ರಂದು ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಖೆಗೆ ಮೂರು ದಿನಗಳ ಕಾಲ ಪೊಲೀಸ್‌ ಕಸ್ಟಡಿಗೆ ಪಡೆಯಲಾಗಿತ್ತು. ಸೋಮವಾರ ಆರೋಪಿಗಳ ಪೊಲೀಸ್‌ ಕಸ್ಟಡಿ ಅವಧಿ ಮುಗಿದ ಹಿನ್ನೆಲೆಯಲ್ಲಿ ಕುಂದಾಪುರ ಸಾರ್ವಜನಿಕ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ನಡೆಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

Advertisement

Udayavani is now on Telegram. Click here to join our channel and stay updated with the latest news.

Next