Advertisement

ಗಂಗಾರಾಮ್‌ ಬಡೇರಿಯಾಗೆ ನ್ಯಾಯಾಂಗ ಬಂಧನ

12:31 PM May 21, 2017 | |

ಬೆಂಗಳೂರು: ಜಂತಕಲ್‌ ಮೈನಿಂಗ್‌ ಕಂಪನಿಗೆ ಅಕ್ರಮವಾಗಿ ಪರವಾನಗಿ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ವಿಶೇಷ ತನಿಖಾ ತಂಡದ ವಶದಲ್ಲಿದ್ದ ಹಿರಿಯ ಐಎಎಸ್‌ ಅಧಿಕಾರಿ ಗಂಗಾರಾಮ್‌ ಬಡೇರಿಯಾ ಅವರನ್ನು ಲೋಕಾಯುಕ್ತ ವಿಶೇಷ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. 

Advertisement

ಪೊಲೀಸ್‌ ಕಸ್ಟಡಿ ಅಂತ್ಯವಾಗಿದ್ದರಿಂದ ತನಿಖಾಧಿಕಾರಿಗಳು ಶನಿವಾರ ಲೋಕಾಯುಕ್ತ ವಿಶೇಷ ನ್ಯಾಯಾಲಯಕ್ಕೆ ಹಾಜರು ಪಡಿಸಿದರು. ವಿಚಾರಣೆ ನಡೆಸಿದ ನ್ಯಾಯಾಧೀಶರು ಜೂನ್‌ 2ರವರೆಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದ್ದಾರೆ. ಈ ನಡುವೆ ಗಂಗಾರಾಮ್‌ ಬಡೇರಿಯಾ ಅವರು ಜಾಮೀನು ಕೋರಿ ಕೋರ್ಟ್‌ಗೆ ಮನವಿ ಮಾಡಿದ್ದಾರೆ. ಮೇ 15ರಂದು ಪ್ರಕರಣದ ವಿಚಾರಣೆಗೆ ಹಾಜರಾದ ಸಂದರ್ಭದಲ್ಲಿ ಬಡೇರಿಯಾ ಅವರನ್ನು ಬಂಧಿಸಿದ್ದ ವಿಶೇಷ ತನಿಖಾ ದಳದ ಅಧಿಕಾರಿಗಳು ಹೆಚ್ಚಿನ ಮಾಹಿತಿ ಸಂಗ್ರಹಿಸಲು ಮೇ 18ರವರೆಗೆ ವಶಕ್ಕೆ ಪಡೆದಿ ದ್ದರು. ಬಳಿಕ ಮತ್ತೆರಡು ದಿನಗಳ ಕಾಲ ಹೆಚ್ಚುವರಿಯಾಗಿ ವಶಕ್ಕೆ ಪಡೆದು ಮಹತ್ವದ ಮಾಹಿತಿ ಸಂಗ್ರಹಿಸಿತ್ತು.

Advertisement

Udayavani is now on Telegram. Click here to join our channel and stay updated with the latest news.

Next