Advertisement

ಮನ್ಸೂರ್‌ ಖಾನ್‌ಗೆ ನ್ಯಾಯಾಂಗ ಬಂಧನ

10:34 PM Sep 24, 2019 | Team Udayavani |

ಬೆಂಗಳೂರು: ಬಹುಕೋಟಿ ಐಎಂಎ ವಂಚನೆ ಪ್ರಕರಣದ ಪ್ರಮುಖ ಆರೋಪಿ ಮನ್ಸೂರ್‌ ಖಾನ್‌ ಹಾಗೂ ಆತನ ಆಪ್ತ ನವೀದ್‌ ಅಹ್ಮದ್‌ನನ್ನು ಮತ್ತೂಮ್ಮೆ ಪರಪ್ಪನ ಅಗ್ರಹಾರ ಕಾರಾಗೃಹಕ್ಕೆ ಕಳುಹಿಸಲಾಗಿದೆ. ಪ್ರಕರಣ ಸಂಬಂಧ ಹೆಚ್ಚಿನ ವಿಚಾರಣೆಗಾಗಿ ಸಿಬಿಐ ಅಧಿಕಾರಿಗಳು ಸೆ.12ರಂದು ಮನ್ಸೂರ್‌ ಖಾನ್‌, ಆತನ ಆಪ್ತ ನವೀದ್‌ ಅಹ್ಮದ್‌ನನ್ನು ವಶಕ್ಕೆ ಪಡೆದುಕೊಂಡಿದ್ದರು. ಕಸ್ಟಡಿ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಸಂಜೆ ಸೆಷನ್ಸ್‌ ಕೋರ್ಟ್‌ ಆವರಣದ ಲ್ಲಿರುವ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಇಬ್ಬರು ಆರೋಪಿಗಳನ್ನು ಹಾಜರು ಪಡಿಸಿದ್ದರು.

Advertisement

ವಿಚಾರಣೆ ನಡೆಸಿದ ಕೋರ್ಟ್‌ ಆರೋಪಿಗಳಿಗೆ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದೆ.ರಾಜ್ಯ ಸರ್ಕಾರದ ಸೂಚನೆ ಮೇರೆಗೆ ಆ.30ರಂದು ಎಫ್ಐಆರ್‌ ದಾಖಲು ಮಾಡಿಕೊಂಡ ಸಿಬಿಐ ಅಧಿಕಾರಿಗಳು, ಈ ಮೊದಲು ತನಿಖೆ ಕೈಗೊಂಡಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ)ದಿಂದ ಸಾಕಷ್ಟು ಮಾಹಿತಿ ಪಡೆದುಕೊಂಡರು. ಅನಂತರ ಪ್ರಕರಣದಲ್ಲಿ ಜೈಲು ಸೇರಿದ್ದ ಆರೋಪಿಗಳನ್ನು ಸೆ.12ರಂದು ಮನ್ಸೂರ್‌ ಖಾನ್‌, ನವೀದ್‌ ಅಹ್ಮದ್‌ ಹಾಗೂ ಬಿಡಿಎ ಅಧಿಕಾರಿ ಪಿ.ಡಿ.ಕುಮಾರ್‌ ಸೇರಿ ಎಲ್ಲ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next