Advertisement

ಮೊಹಮ್ಮದ್‌ ನಲಪಾಡ್‌ ನ್ಯಾಯಾಂಗ ಬಂಧನ ವಿಸ್ತರಣೆ

07:00 AM Apr 18, 2018 | Team Udayavani |

ಬೆಂಗಳೂರು:ಉದ್ಯಮಿ ಲೋಕನಾಥ್‌ ಪುತ್ರ ವಿದ್ವತ್‌ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ಎನ್‌.ಎ.ಹ್ಯಾರಿಸ್‌ ಪುತ್ರ ಮೊಹಮ್ಮದ್‌ ನಲಪಾಡ್‌ಗೆ ವಿಧಿಸಿದ್ದ ನ್ಯಾಯಾಂಗ ಬಂಧನ ಅವಧಿ ಎಸಿಎಂಎಂ ನ್ಯಾಯಾಲಯ ಏ. 28ರವರೆಗೆ ವಿಸ್ತರಿಸಿದೆ.

Advertisement

ಮೊಹಮ್ಮದ್‌ ನಲಪಾಡ್‌ ಮತ್ತಿತರ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮಂಗಳವಾರ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದರು. ವಿಚಾರಣೆ ನಡೆಸಿದ ಎಸಿಎಂಎಂ ನ್ಯಾಯಾಲಯ ಏ.28ರ ವರೆಗೆ ನ್ಯಾಯಾಂಗ ಬಂಧನ ಅವಧಿ ವಿಸ್ತರಿಸಿ ಆದೇಶಿಸಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ಏ.30ರೊಳಗಾಗಿ ದೋಷಾರೋಪಪಟ್ಟಿ ಸಲ್ಲಿಸಲು ಸಿದ್ದತೆ ನಡೆಸಿದ್ದಾರೆ. ಮೊಹಮ್ಮದ್‌ ನಲಪಾಡ್‌ ಮತ್ತಿತರ ಆರೋಪಿಗಳು ಕಾಲು ತಗುಲಿದ ವಿಚಾರಕ್ಕೆ ಫೆ. 18ರಂದು ವಿದ್ವತ್‌ ಮೇಲೆ ಜಗಳ ತೆಗೆದು ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next