Advertisement

ಕಾರ್ಮಿಕರಿಗೆ ಸಂಬಳ ನೀಡದ ಆರೋಪ: ಸಹಕಾರ ಸಾರಿಗೆ ಸಂಸ್ಥೆ ಅಧ್ಯಕ್ಷ ಧರ್ಮಪ್ಪ ನ್ಯಾಯಾಂಗ ಬಂಧನ

02:52 PM May 30, 2022 | Team Udayavani |

ಚಿಕ್ಕಮಗಳೂರು: ಮಲೆನಾಡಿನ ಪ್ರತಿಷ್ಠಿತ ಸಹಕಾರ ಸಾರಿಗೆ ಸಂಸ್ಥೆ ಅಧ್ಯಕ್ಷ ಈ.ಎಸ್ ಧರ್ಮಪ್ಪ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಕೊಪ್ಪದ ಜೆ.ಎಂ.ಎಫ್.ಸಿ ನ್ಯಾಯಾಲಯ ಸೋಮವಾರ ಆದೇಶಿಸಿದೆ.

Advertisement

ಕೊಪ್ಪದ ಸಹಕಾರ ಸಾರಿಗೆ ಸಂಸ್ಥೆಯೂ ಕಳೆದ 2 ವರ್ಷದ ಹಿಂದೆ ನಷ್ಟದ ನೆಪವೊಡ್ಡಿ ತನ್ನೆಲ್ಲ ಸೇವೆಗಳನ್ನು ಸ್ಥಗಿತಗೊಳಿಸಿತ್ತು. ಈ ವೇಳೆ ಕಾರ್ಮಿಕರಿಗೆ ಪಿಎಫ್ ಹಣ ಹಾಗೂ ಸಂಬಳವನ್ನು ನೀಡಿರಲಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. ಈ ಸಂಬಂಧ ಕಾರ್ಮಿಕ ಸಂಘಟನೆ ಕೋರ್ಟ್ ನಲ್ಲಿ ದಾವೆಯನ್ನು ಹೂಡಿದ್ದರು.

ಸೋಮವಾರ ಬೆಳಿಗ್ಗೆ ಕೊಪ್ಪ ಪೊಲೀಸರು ಭಂಡಿಗಡಿಯಲ್ಲಿ ಧರ್ಮಪ್ಪರವರನ್ನು ಬಂಧಿಸಿ ಕೋರ್ಟ್ ಗೆ ಹಾಜರು ಪಡಿಸಿದ್ದರು. ಧರ್ಮಪ್ಪರವರ ಮೇಲಿರುವ ಆರೋಪಗಳನ್ನು ಪರಿಶೀಲಿಸಿರು ಕೋರ್ಟ್ ಜೂ. 10ರ ವರೆಗೆ ನ್ಯಾಯಾಂಗ ಬಂಧನವನ್ನು ವಿಧಿಸಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next