Advertisement

ಚಿಕ್ಕಮಗಳೂರು: ಆನೆದಂತ ಮಾರಾಟ ಯತ್ನ; ಬಂಧಿತರು ಜೂ.18 ರವರೆಗೆ ನ್ಯಾಯಾಂಗ ಬಂಧನ

12:39 PM Jun 08, 2022 | Team Udayavani |

ಚಿಕ್ಕಮಗಳೂರು: ಸಮೀಪದ ಅಲ್ಲಂಪುರ ಬಳಿ ಆನೆ ದಂತ ಮಾರಾಟಕ್ಕೆ ಯತ್ನಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.

Advertisement

ಕತ್ಲೆಕಾನ್ ತೋಟದ ಮೇಸ್ತ್ರಿ ಆರ್ ಶಿವಕುಮಾರ್,ಮಸ್ಕಲ್  ಮರಡಿಯ ಕೆಲಸಗಾರ ಸುಂದರೇಶ್, ತರಿಕೆರೆ ತಾಲ್ಲೂಕು ನಂದಿಬಟ್ಟಲಿನ ಪಿ. ಮಹಾಂತೇಶ್, ಭದ್ರಾವತಿ ತಾಲ್ಲೂಕು ಹೊಳೆಹೊನ್ನೂರಿನ  ವೆಲ್ಡರ್ ನೂರ್ ಅಹ್ಮದ್ ,ಚಿತ್ರದುರ್ಗ ತಾಲ್ಲೂಕಿನ  ಪಳಿಕೆಹಳ್ಳಿಯ ಅಂಜನಪ್ಪ ಬಂಧಿತರು.

ಅಲ್ಲಂಪುರ ಪೆಟ್ರೋಲ್ ಬಂಕ್ ಸಮೀಪ ಆನೆ ದಂತ ಮಾರಾಟಕ್ಕೆ ಯತ್ನಿಸಿದಾಗ ಇವರನ್ನು ಬಂಧಿಸಿದ್ದು ಆನೆ ದಂತ ಓಮ್ನಿ ವಾಹನ ವಶಪಡಿಸಿಕೊಳ್ಳಲಾಗಿದೆ.

ಇಲ್ಲಿನ ಸಿಐಡಿ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸರು ಕಾರ್ಯಾಚರಣೆ ನಡೆಸಿದ್ದು ಭದ್ರಾ ವನ್ಯಜೀವಿ ವಲಯದಲ್ಲಿ ಆನೆದಂತ ತಂದಿರುವುದನ್ನು ಖಚಿತಪಡಿಸಿದ್ದಾರೆ.

ಬಂಧಿತರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ಜೂನ್ 18 ರ ವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿ ಎರಡನೇ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ ಸಿ ಕೋರ್ಟ್ ಆದೇಶ ನೀಡಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next