Advertisement

ಜು. 27ಕ್ಕೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ

10:15 PM Jul 24, 2023 | Team Udayavani |

ಬೆಂಗಳೂರು: ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಜು. 27ರಂದು ನಡೆಯಲಿದೆ. ಸರಕಾರ ಉರುಳಿಸುವ ಪ್ರಯತ್ನಗಳು ನಡೆಯುತ್ತಿವೆ ಎಂಬ ಆರೋಪದಲ್ಲಿ ನಡುವೆ ನಡೆಯುವ ಈ ಸಭೆ ಅತ್ಯಂತ ಮಹತ್ವ ಪಡೆದುಕೊಂಡಿದೆ.

Advertisement

ಒಂದೆಡೆ ವಿಧಾನ ಪರಿಷತ್ತಿನ ಸದಸ್ಯ ಹಾಗೂ ಕಾಂಗ್ರೆಸ್‌ ನಾಯಕ ಬಿ.ಕೆ. ಹರಿಪ್ರಸಾದ್‌ “ಮುಖ್ಯಮಂತ್ರಿ ಮಾಡುವುದೂ ಗೊತ್ತು; ಕೆಳಗಿಳಿಸುವುದೂ ಗೊತ್ತು’ ಎಂಬ ಹೇಳಿಕೆ ಅದೇ ಪಕ್ಷದಲ್ಲಿ ಬಿರುಗಾಳಿ ಎಬ್ಬಿಸಿದ್ದರೆ, ಮತ್ತೊಂದೆಡೆ “ಸರಕಾರವನ್ನು ಉರುಳಿಸುವ ಪ್ರಯತ್ನ ನಡೆಯುತ್ತಿರುವ ಬಗ್ಗೆ ತಮ್ಮ ಗಮನಕ್ಕೂ ಬಂದಿರುವುದಾಗಿ’ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಹೇಳಿದ್ದಾರೆ.

ಈ ಎರಡು ಹೇಳಿಕೆಗಳು ವ್ಯಾಪಕ ಚರ್ಚೆಗೆ ಗ್ರಾಸವಾಗಿದೆ. ಪ್ರಮುಖವಾಗಿ ಗ್ಯಾರಂಟಿಗಳು ಮನೆ-ಮನೆಗೆ ತಲುಪಬೇಕು. ಇದಕ್ಕಾಗಿ ಶಾಸಕರು ತಮ್ಮ ಬೆಂಬಲಿಗರೊಂದಿಗೆ ಕಾರ್ಯನಿರ್ವಹಿಸಬೇಕು. ಸ್ಥಳೀಯವಾಗಿ ಯಾವುದೇ ರೀತಿ ಗೊಂದಲ ಸೃಷ್ಟಿಸುವುದು, ಬಣ ರಾಜಕೀಯಕ್ಕೆ ಅವಕಾಶ ನೀಡಬಾರದು ಎಂದು ಸೂಚನೆ ನೀಡಲಿದ್ದಾರೆ ಎನ್ನಲಾಗಿದೆ.

 

Advertisement

Udayavani is now on Telegram. Click here to join our channel and stay updated with the latest news.

Next