Advertisement

July 4: ರಾಜ್ಯ ಬಿಜೆಪಿ ಕಾರ್ಯಕಾರಿಣಿ

11:38 PM Jun 30, 2024 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆಯ ಬಳಿಕ ಇದೇ ಮೊದಲ ಬಾರಿಗೆ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ಜು. 4ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ.

Advertisement

ಈ ಬಗ್ಗೆ ಮಾಹಿತಿ ವಿಧಾನ ಪರಿಷತ್‌ವಿಪಕ್ಷದ ಮುಖ್ಯ ಸಚೇತಕ ಎನ್‌. ರವಿಕುಮಾರ್‌ ಸುದ್ದಿಗಾರರಿಗೆ ನೀಡಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅಧ್ಯಕ್ಷತೆಯಲ್ಲಿ ನಡೆಯುವ ಸಭೆಯನ್ನು ಕೇಂದ್ರ ಸಚಿವ ನಿತಿನ್‌ ಗಡ್ಕರಿ ಉದ್ಘಾಟಿಸಲಿದ್ದಾರೆ.

ರಾಜ್ಯದಿಂದ ಆಯ್ಕೆಯಾಗಿರುವ ಕೇಂದ್ರ ಸಚಿವರಾದ ಪ್ರಹ್ಲಾದ್‌ ಜೋಶಿ, ನಿರ್ಮಲಾ ಸೀತಾರಾಮನ್‌, ವಿ. ಸೋಮಣ್ಣ, ಶೋಭಾ ಕರಂದ್ಲಾಜೆ, ವಿಪಕ್ಷ ನಾಯಕ ಆರ್‌. ಅಶೋಕ್‌, ಶಾಸಕರು, ಸಂಸದರು ಭಾಗವಹಿಸಲಿದ್ದಾರೆ ಎಂದರು.

ಕೇಂದ್ರದಲ್ಲಿ ಎನ್‌ಡಿಎ 3ನೇ ಬಾರಿ
ಅಧಿಕಾರ ಪಡೆದ ಸಾಧನೆ ಸಂಬಂಧ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ಮೋದಿ ಅವರಿಗೂ ಅಭಿನಂದನೆ ನಿರ್ಣಯ ತೆಗೆದುಕೊಳ್ಳು ತ್ತೇವೆ. ಅಲ್ಲದೆ ರಾಜ್ಯ ಸರಕಾರದ ವೈಫಲ್ಯ, ಭ್ರಷ್ಟಾಚಾರ, ದರ ಏರಿಕೆಯನ್ನು ಖಂಡಿಸುವ ಇನ್ನೊಂದು ನಿರ್ಣಯ ವನ್ನೂ ಅಂಗೀಕರಿಸುತ್ತೇವೆ ಎಂದರು.

Advertisement

ನಾಡಿದ್ದು ಸಿಎಂ ಮನೆಗೆ ಮುತ್ತಿಗೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್‌ ಹಗರಣದ ತನಿಖೆ ತೀವ್ರಗೊಳಿಸುವಂತೆ ಹೇಳಿದ್ದಾರೆ. ಇದು ಒಂದು ರೀತಿ ಬೇಲಿಯೇ ಎದ್ದು ಹೊಲ ಮೇಯುವಂತಿದೆ. ದದ್ದಲ್‌ ಮೊದಲು ರಾಜೀನಾಮೆ ಕೊಡಬೇಕು. ಹಣ ಅಕ್ರಮ ವರ್ಗಾವಣೆ ಕುರಿತು ಸಭೆ ನಡೆಸಿದ ಸಚಿವ ಡಾ| ಶರಣಪ್ರಕಾಶ್‌ ಪಾಟೀಲ್‌, 700 ಖಾತೆಗೆ ಹಣ ಹಾಕಿದ ಸಂಬಂಧ, 187 ಕೋಟಿ ರೂ. ಹಗಲು ದರೋಡೆ ಆದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಇದಕ್ಕಾಗಿ ಜು. 3ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next