Advertisement

ಕೈ ಪ್ರಚಾರ ಸಮಿತಿಗೆ ಜಂಬೋ ತಂಡ

12:30 AM Feb 01, 2019 | Team Udayavani |

ಬೆಂಗಳೂರು: ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಪಿಸಿಸಿ ಪ್ರಚಾರ ಸಮಿತಿಗೆ 63 ಜನರ ಬೃಹತ್‌ ತಂಡವನ್ನು ಎಐಸಿಸಿ
ರಚಿಸಿದೆ. ಎಚ್‌.ಕೆ.ಪಾಟೀಲ್‌ ಅಧ್ಯಕ್ಷತೆಯ ಸಮಿತಿಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ಮಲ್ಲಿಕಾರ್ಜುನ
ಖರ್ಗೆ, ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್‌, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್‌ ಖಂಡ್ರೆ, ಸಚಿವರಾದ ಎಂ.ಬಿ.ಪಾಟೀಲ್‌, ಡಿ.ಕೆ.ಶಿವಕುಮಾರ್‌, ಸತೀಶ್‌ ಜಾರಕಿಹೊಳಿ, ಜಮೀರ್‌ ಅಹಮದ್‌, ಜಯಮಾಲಾ ಸೇರಿದಂತೆ ಸಚಿವರು, ಮಾಜಿ ಸಚಿವರು, ಶಾಸಕರು, ವಿಧಾನ ಪರಿಷತ್‌ ಸದಸ್ಯರು, ಪಕ್ಷದ ಪದಾಧಿಕಾರಿಗಳು ಈ ಸಮಿತಿಯ ಸದಸ್ಯರಾಗಿದ್ದಾರೆ. 

Advertisement

ಅಲ್ಲದೆ ಕೆಪಿಸಿಸಿಯ ಎಲ್ಲ ಮುಂಚೂಣಿ ಘಟಕಗಳ ಅಧ್ಯಕ್ಷರು ಸಮಿತಿಯ ಸದಸ್ಯರಾಗಿರಲಿದ್ದಾರೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್‌ ಆದೇಶದಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next