ಮುಂಬಯಿ: ಬಂಟರ ಸಂಘ ಮುಂಬಯಿ ಇದರ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಆಶ್ರಯದಲ್ಲಿ ಜೂ. 10ರಂದು ಕರ್ಲಾ ಪೂರ್ವದ ಬಂಟರ ಭವನದ ಶ್ರೀಮತಿ ರಾಧಾನಾಯಿ ಟಿ. ಭಂಡಾರಿ ಸಭಾಗೃಹದಲ್ಲಿ ಜರಗಲಿರುವ ವಾರ್ಷಿಕ ಮೆಗಾ ಆರ್ಥಿಕ ಸಹಾಯ ವಿತರಣಾ ಮೇಳದ ಪೂರ್ವಭಾವಿ ತಯಾರಿಯ ಬಗ್ಗೆ ವಿಶೇಷ ಸಭೆಯು ಇತ್ತೀಚೆಗೆ ಸಂಘದ ಕಾಶಿ ಸಿದ್ದು ಶೆಟ್ಟಿ ಕಿರು ಸಭಾಗೃಹದಲ್ಲಿ ಸಂಘದ ಅಧ್ಯಕ್ಷ ಪದ್ಮನಾಭ ಎಸ್. ಪಯ್ಯಡೆ ಅವರ ಅಧ್ಯಕ್ಷತೆಯಲ್ಲಿ ಜರಗಿತು.
ಆರ್ಥಿಕ ಸಹಾಯ ವಿತರಣಾ ಕಾರ್ಯಕ್ರಮಕ್ಕೆ ಅತಿಥಿ ಗಣ್ಯರನ್ನು ಆಮಂತ್ರಿಸುವ ಬಗ್ಗೆ ಹಾಗೂ ಸಹಾಯ ವಿತರಣಾ ಕೌಂಟರ್ ವ್ಯವಸ್ಥೆಯ ಬಗ್ಗೆ ವಿಚಾರ ವಿನಿಮಯ ನಡೆಸಲಾಯಿತು.
ಸಲಹೆಗಾರರಾದ ಐಕಳ ಹರೀಶ್ ಶೆಟ್ಟಿ, ಶಾಂತಾರಾಮ ಶೆಟ್ಟಿ ಸನ್ಸಿಟಿ, ಸಂಘದ ಗೌರವ ಪ್ರಧಾನ ಕಾರ್ಯದರ್ಶಿ, ಸಿಎ ಸಂಜೀವ ಶೆಟ್ಟಿ, ಕೋಶಾಧಿಕಾರಿ ಪ್ರವೀಣ್ ಬಿ. ಶೆಟ್ಟಿ, ಸಂಘದ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಮಿತಿ ಕಾರ್ಯಾಧ್ಯಕ್ಷ ಉಳೂ¤ರು ಮೋಹನ್ದಾಸ್ ಶೆಟ್ಟಿ, ಉಪಕಾರ್ಯಾಧ್ಯಕ್ಷ ಸುಬ್ಬಯ್ಯ ಶೆಟ್ಟಿ, ಕಾರ್ಯದರ್ಶಿ ಖಾಂದೇಶ್ ಭಾಸ್ಕರ್ ಶೆಟ್ಟಿ, ಕೋಶಾಧಿಕಾರಿ ಸುರೇಶ್ ಶೆಟ್ಟಿ ಮರಾಠ, ಬಂಟರವಾಣಿಯ ಗೌರವ ಪ್ರಧಾನ ಸಂಪಾದಕ ಅಶೋಕ್ ಪಕ್ಕಳ, ಪ್ರೇಮನಾಥ ಶೆಟ್ಟಿ ಮುಂಡ್ಕೂರು, ದಿವಾಕರ ಶೆಟ್ಟಿ ಕುರ್ಲಾ, ಕರುಣಾಕರ ಶೆಟ್ಟಿ ಕಲ್ಲಡ್ಕ, ಪ್ರಕಾಶ್ ಶೆಟ್ಟಿ ನಲ್ಯಗುತ್ತು, ಆರ್. ಕೆ. ಶೆಟ್ಟಿ, ರಾಜೀವ್ ಭಂಡಾರಿ, ಪ್ರಭಾಕರ ಶೆಟ್ಟಿ ಡೊಂಬಿವಲಿ, ರವೀಂದ್ರ ವೈ. ಶೆಟ್ಟಿ, ಆದ್ಯಪಾಡಿ ಬಾಲಕೃಷ್ಣ ಶೆಟ್ಟಿ, ನಾರಾಯಣ ಶೆಟ್ಟಿ, ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು.